ದ.ಕ: ಬೆಳಗ್ಗೆ 6ರಿಂದ ಮಧ್ಯಾಹ್ನ 1ರ ವರೆಗೆ ಎಲ್ಲಾ ಅಂಗಡಿ ಓಪನ್, ನಾಳೆಯಿಂದ ಜಾರಿ

Upayuktha
0

ಮಂಗಳೂರು: ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಮುಖ್ಯಮಂತ್ರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಸರಕಾರದಿಂದ ಅನುಮತಿ ಸಿಕ್ಕಿದೆ.


ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಬಹುದು. ಆದರೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.





ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಮಧ್ಯಾಹ್ನದ ವೇಳೆಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಉಸ್ತುವಾರಿ ಸಚಿವರು ವೀಡಿಯೋದಲ್ಲಿ ತಿಳಿಸಿರುವುದು ಅಧಿಕೃತ ಆದೇಶ ಹೊರಬೀಳುವಾಗ ಸಮಯದಲ್ಲಿ ಬದಲಾವಣೆಯಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 2ರ ವರೆಗೆ ಎಂದು ಸಚಿವರು ಹೇಳಿದ್ದರೆ, ಅಧಿಕೃತ ಆದೇಶದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಎಂದು ಬದಲಾಯಿಸಲಾಗಿದೆ.

ಸಂಸದ ನಳಿನ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.


ಬುಧವಾರದಿಂದ ಅನ್ವಯವಾಗುವ ಲಾಕ್‌ಡೌನ್‌  ಪರಿಷ್ಕರಣೆ ಮುಖ್ಯಾಂಶಗಳು

  1. ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಪ್ರಯಾಣಿಕರ ಸಹಿತ ಬೆಳಗ್ಗೆ 7ರಿಂದ ಅಪರಾಹ್ನ 1ರ ತನಕ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ನಿಂತು ಪ್ರಯಾಣಕ್ಕೆ ಅವಕಾಶ ಇಲ್ಲ.
  2. ಬೆಳಗ್ಗೆ 7ರಿಂದ ಅಪರಾಹ್ನ 1ರ ವರೆಗೆ ಹವಾನಿಯಂತ್ರಿತ ಹೊರತು ಪಡಿಸಿ ಬಾಕಿ ಎಲ್ಲ ಅಂಗಡಿ, ಮಳಿಗೆ ತೆರೆಯಬಹುದು.
  3. ಬೆಳಗ್ಗೆ 7ರಿಂದ 10ರ ವರೆಗೆ ನಡಿಗೆ, ಜಾಗಿಂಗ್ ಬಳಕೆಗೆ ಉದ್ಯಾನಗಳನ್ನು ತೆರೆಯಬಹುದು.
  4. ವಾರಾಂತ್ಯ ಕರ್ಪ್ಯೂ ಸಂದರ್ಭ ಅಗತ್ಯ ಸೇವೆ ಹೊರತು ಇನ್ಯಾವ ಸೇವೆ, ಬಸ್, ಇತರ ವಾಹನ ಸಂಚಾರಕ್ಕೂ ಅವಕಾಶ ಇಲ್ಲ.
  5. ಹೊಟೇಲುಗಳಿಂದ ಪಾರ್ಸೆಲ್, ಹೋಂ ಡೆಲಿವರಿಗೆ ಮಾತ್ರ ಅವಕಾಶ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top