ರಾಜ್ಯದಲ್ಲಿ ವರುಣನ ಅಬ್ಬರ: ಡ್ಯಾಂಗಳಿಗೆ ಭಾರೀ ನೀರು

Upayuktha
0



ಬೆಂಗಳೂರು: ರಾಜ್ಯದಲ್ಲಿ ಮಳೆಯಾರ್ಭಟದಿಂದ ಆಲಮಟ್ಟಿ, ಕೆಆರ್ ಎಸ್, ಹೇಮಾವತಿ, ಕಬಿನಿ, ತುಂಗಭದ್ರ ಮುಂತಾದ ಜಲಾಶಯಗಳಿಗೆ ನೀರಿನ ಒಳ ಹರಿವು ತುಂಬಾ ಹೆಚ್ಚಳವಾಗಿದೆ.


ಕೊಡಗು ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿರುದರಿಂದ ಮಂಡ್ಯ ಜಿಲ್ಲೆಯ ಕೆಆರ್‍ಎಸ್ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಶನಿವಾರ 90.40 ಅಡಿಗೆ ಏರಿಕೆಯಾಗಿದೆ. ಅಣೆಕಟ್ಟಿಗೆ 18,556 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಅಣೆಕಟ್ಟಿನಿಂದ 2164 ಕ್ಯುಸೆಕ್‌  ನೀರನ್ನು ಹೊರ ಬಿಡಲಾಗಿದೆ. ಕೆಆರ್‌ಎಸ್‌ ನೀರಿನ ಮಟ್ಟ 82.54 ಅಡಿಗೆ ಕುಸಿತಗೊಂಡಿದ್ದು, ಕಳೆದ ವರ್ಷಕ್ಕಿಂತ 8 ಅಡಿ ಕಡಿಮೆಯಾಗಿದೆ.


ಮೈಸೂರು ಜಲ್ಲೆಯ ಕಬಿನಿ ಜಲಾಶಯಕ್ಕೆ 16,200 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ 5,000 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬಳ್ಳಾರಿ ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 2 ಟಿಎಂಸಿಯಷ್ಟು ನೀರು ಹರಿದು ಬಂದಿದೆ ಅದರ ಜೊತೆಗೆ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯಕ್ಕೆ 29,473 ಕ್ಯು. ನೀರು ಹರಿದು ಬರುತ್ತಿದೆ. 73 ಕ್ಯು ನೀರನ್ನು ಹೊರಬಿಡಲಾಗುತ್ತದೆ.


ಹಾಸನ ಸಮೀಪದ ಯಗುಚಿ ಜಲಾಶಯಕ್ಕೆ ಪ್ರತಿನಿತ್ಯ 3 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಈ ಜಲಾಶಯ ತುಂಬಲು 1.50 ಅಡಿ ಮಾತ್ರ ಬಾಕಿ ಇದೆ. ಇನ್ನೆರಡು ದಿನಗಳಲ್ಲಿ ಜಲಾಶಯ ತುಂಬಿ ಭರ್ತಿಯಾಗುತ್ತದೆ.


ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಜಲಾಶಯದಿಂದ 5500 ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ನೀರನ್ನು ಹೊರಬಿಡಲಾಗುತ್ತದೆ.


Key Words: Rains, Karnataka, Water level in Dams, KRS, ಮಳೆ, ಅಣೆಕಟ್ಟೆಗಳ ನೀರಿನ ಮಟ್ಟ, ಕೆಎಆರ್‌ಎಸ್,


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top