ಎಂಆರ್‌ಪಿಎಲ್ ತ್ಯಾಜ್ಯದ ಪರಿಣಾಮ? ಸುಟ್ಟು ಹೋದ ಭತ್ತದ ಮೊಳಕೆ

Upayuktha
0


 

ಸುರತ್ಕಲ್: ಸೂರಿಂಜೆ ಮತ್ತು ಕುತ್ತೆತ್ತೂರಿನಲ್ಲಿ ಭತ್ತದ ಬೆಳೆಗೆ ನೇಜಿ ಹಾಕಿದ ಸುಮಾರು ಆರು ಕಳಸೆ ಗದ್ದೆಯ ಬೀಜ ಮೊಳಕೆ ಹಂತದಲ್ಲಿ ಸುಟ್ಟು ಹೋಗಿದ್ದು ಎಂಆರ್ ಪಿಎಲ್ ನಿಂದ ಹರಿದು ಬಂದ ಕೆಮಿಕಲ್ ಯುಕ್ತ ನೀರು ಇದಕ್ಕೆ ಕಾರಣ ಎಂದು ರೈತರು ಭೀತಿ ವ್ಯಕ್ತಪಡಿಸಿದ್ದಾರೆ.


ಬೊಳ್ಳಾರ ಗುತ್ತಿನ ಪ್ರಕಾಶ್ ಶೆಟ್ಟಿ ಎಂಬವರು ಕೃಷಿ ಇಲಾಖೆಯಿಂದ ಪಡೆದ ಭತ್ತವನ್ನು ಮೊಳಕೆ ಬರಿಸಿ ಬಿತ್ತಿದ್ದರು. ಇನ್ನೊರ್ವ ರೈತ ತಾನೇ ಸಿದ್ದಪಡಿಸಿದ ಭತ್ತವನ್ನು ಮೊಳಕೆ ಬರಿಸಿ ಬಿತ್ತಿದ್ದರು. ಇಬ್ಬರು ರೈತರು ಬಿತ್ತಿದ ಬೀಜವೂ ಸುಟ್ಟು ಕಪ್ಪು ಕಪ್ಪಾಗಿ ಹೋಗಿದೆ.


ಎಂಅರ್ ಪಿಎಲ್ ಬಳಿಯ ಮೂಡುಪದವು ಸಮೀಪ ಒಸರುವ ತ್ಯಾಜ್ಯ ನೀರು ಕುತ್ತೆತ್ತೂರು ಮೂಲಕ ಹರಿದು ಸೂರಿಂಜೆಗೆ ಬರುತ್ತದೆ. ಇದರ ಪರಿಣಾಮ ಇಲ್ಲಿ ಕೃಷಿಗೆ ತೊಂದರೆಯಾಗಿ ರೈತರು ಕೃಷಿ ಮಾಡುವುದನ್ನೇ ಬಿಟ್ಟಿದ್ದಾರೆ. ಈಗ ಸೂರಿಂಜೆ ರೈತರು ಮಾಡಿದ ಕೃಷಿ ಯತ್ನ ವಿಫಲವಾಗಿದೆ. ಎನ್ನಲಾಗಿದೆ.


ಇತ್ತೀಚೆಗೆ ಪೊನ್ನಗಿರಿ ಮಹಾಲಿಂಗೇಶ್ವರ ದೇವಳದ ಬಳಿ ನೀರಿನಲ್ಲಿ ತೈಲದ ಅಂಶ ಕಂಡು ಬಂದಿದ್ದು, ಮೀನುಗಳು ಸತ್ತಿದ್ದವು. ಇಲ್ಲಿಂದ ನೀರಿನ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆದರೆ ಅದರ ಫಲಿತಾಂಶ ಇನ್ನೂ ಜನತೆಗೆ ತಿಳಿದಿಲ್ಲ ಎಂಬ ಅಸಮಾಧಾನವನ್ನು ರೈತರು ವ್ಯಕ್ತಪಡಿಸಿದ್ದಾರೆ.


(ಉಪಯುಕ್ತ ನ್ಯೂಸ್)

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top