ವಿವಿ ಕಾಲೇಜು: ಇನ್ನೊವೇಷನ್ ಕ್ಲಬ್ ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆ

Upayuktha
0


 

ಮಂಗಳೂರು: ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಇನ್ನೊವೇಷನ್ ಕ್ಲಬ್ ವತಿಯಿಂದ “ಕನ್ನಡ ಪತ್ರಿಕಾ ದಿನ" ಆಚರಣೆಯ ಅಂಗವಾಗಿ “ಕನ್ನಡ ಪತ್ರಿಕೆಗಳ ಇತಿಹಾಸ ಮತ್ತು ಪದವಿ ವಿದ್ಯಾರ್ಥಿಗಳಿಗೆ ದಿನಪತ್ರಿಕೆಯ ಉಪಯೋಗಗಳು" ಎಂಬ ವಿಷಯದ ಕುರಿತು ಆನ್‌ಲೈನ್‌ ಸಂವಾದ ಹಮ್ಮಿಕೊಳ್ಳಲಾಗಿತ್ತು.   


ಇನ್ನೋವೇಷನ್ ಸಂಘದ ಸಹನಿರ್ದೇಶಕ  ಡಾ. ಸಿದ್ದರಾಜು ಎಂ.ಎನ್‌ ಮಾತನಾಡುತ್ತಾ, ದಿನ ಪತ್ರಿಕೆ ಎಂಬುದು ಸುದ್ದಿಯ ಜೊತೆಗೆ, ಸಾಹಿತ್ಯ, ವಿಜ್ಞಾನ, ಪದಬಂಧ, ಗಣಿತದ ಸುಡೊಕು, ಸಿನಿಮಾ ರಂಜನೆ ಎಲ್ಲವನ್ನೂ ನೀಡುವ ಅದ್ಭುತ ಮಾಹಿತಿಯ ಕಣಜ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾದರೆ ದಿನ ಪತ್ರಿಕೆ ಓದುವುದು ಅನಿವಾರ್ಯ, ಎಂದು ಅಭಿಪ್ರಾಯಪಟ್ಟರು.


ಸಂವಾದದಲ್ಲಿ  ಪಾಲ್ಗೊಂಡ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಗುರುಪ್ರಸಾದ್, ಜರ್ಮನ್‌ ಕ್ರೈಸ್ತ ಧರ್ಮ ಪ್ರಚಾರಕ ಹರ್ಮನ್‌ ಮೋಗ್ಲಿಂಗ್‌ ಅವರು ಹಲವು ಅಡ್ಡಿಗಳ ನಡುವೆಯೂ ಮೊದಲ ಕನ್ನಡ ಪತ್ರಿಕೆ ಆರಂಭಿಸಿದ್ದಲ್ಲದೆ, ಕನ್ನಡ ಸಾಹಿತ್ಯಕ್ಕೂ ಅಪಾರ ಕೊಡುಗೆ ನೀಡಿದ್ದಾರೆ, ಎಂದರು.  


ವಿದ್ಯಾರ್ಥಿನಿಯರಾದ ಚೈತಾಲಿ ಪತ್ರಿಕೆಯ ಇತಿಹಾಸ ಮತ್ತು ಬೆಳವಣಿಗೆ ಬಗ್ಗೆ ವಿಷಯ ಮಂಡಿಸಿದರು. ಗೌಸಿಯಾ ಕಾರ್ಯಕ್ರಮ ನಿರೂಪಿಸಿದರೆ,  ಮೆಲ್ರಿನ್ ಸ್ವಾಗತಿಸಿ, ಶ್ರುತಿ ವಂದಿಸಿದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top