ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ನೀಡಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ (ಜು.05) 15-08-2021ರ ವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆ, ಪ್ರಸಾದ, ಅನ್ನಸಂತರ್ಪಣೆ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ.
ವಾರಾಂತ್ಯದಲ್ಲಿ (ಶನಿವಾರ/ಭಾನುವಾರ) ದೇವರ ದರ್ಶನವನ್ನೂ ನಿರ್ಬಂಧಿಸಲಾಗಿದೆ. ಭಕ್ತಾದಿಗಳೆಲ್ಲರೂ ಸಹಕರಿಸುವಂತೆ ವಿನಂತಿಸುತ್ತೇವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ