|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಮಕ ಶ್ರಾವಣ: ಶ್ರೀಮದ್ರಾಮಾಯಣ ವಾಚನ-ವ್ಯಾಖ್ಯಾನ; ಪಾದುಕಾ ಪ್ರದಾನ

ಗಮಕ ಶ್ರಾವಣ: ಶ್ರೀಮದ್ರಾಮಾಯಣ ವಾಚನ-ವ್ಯಾಖ್ಯಾನ; ಪಾದುಕಾ ಪ್ರದಾನ


ಕಾಸರಗೋಡು: "ಪ್ರಾಚೀನವಾದ ಗಮಕ ಕಲೆ ಭಾರತೀಯ ಸಂಸ್ಕೃತಿಯ ದ್ಯೋತಕವಾಗಿದೆ. ಶ್ರಾವಣ ಮಾಸದಲ್ಲಿ ಶ್ರೀಮದ್ರಾಮಾಯಣದ ವಾಚನ-ವ್ಯಾಖ್ಯಾನಗಳನ್ನು ಮಾಡುವುದರಿಂದ ಮಾನವರ ಜೀವನವು ಸಾರ್ಥಕವಾಗುವುದು; ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ಭಾರತೀಯರ ಆರಾಧ್ಯ ಮೂರ್ತಿಯಾಗಿದ್ದಾನೆ. ಅಂಥವನ ದಿವ್ಯಕಥೆಯನ್ನು ನಾವೆಲ್ಲರೂ ಗೌರವದಿಂದ ಮನನ ಮಾಡಬೇಕು" ಎಂಬುದಾಗಿ ಕಾಸರಗೋಡು ನಗರಸಭಾ ಸದಸ್ಯೆ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತಾ ಐ ಭಟ್ ಅವರು ಅಭಿಪ್ರಾಯ ಪಟ್ಟರು.  


ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಮತ್ತು ಸಿರಿಗನ್ನಡ ವೇದಿಕೆಯ ಕೇರಳ ಗಡಿನಾಡ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆದಿ ಗಮಕಿಗಳಾದ ಕುಶಲವರ ಜನ್ಮಮಾಸಾಚರಣೆಯ ಸರಣಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಶುಕ್ರವಾರ ಕಾಸರಗೋಡಿನ ವಿದ್ಯಾನಗರದ ಚಿನ್ಮಯ ಕಾಲೊನಿಯ ಶ್ರೀಕೃಷ್ಣ ಮಂದಿರದಲ್ಲಿ  ಮಾತನಾಡುತ್ತಿದ್ದರು.


ನಿವೃತ್ತ R.D.O ಸಿ.ಕುಮಾರ್ ಅವರು ದೀಪ ಬೆಳಗುವುದರೊಂದಿಗೆ ಸಮಾರಂಭವನ್ನು ಉದ್ಘಾಟಿಸಿದರು..ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಶ್ರೀ ತೆಕ್ಕೆಕೆರೆ ಶಂಕರನಾರಾಯಣ ಭಟ್ಟರು ಅಧ್ಯಕ್ಷತೆ ವಹಿಸಿದರು.  


ಈ ಸಂದರ್ಭದಲ್ಲಿ ತೊರವೆ ರಾಮಾಯಣದ ಪಾದುಕಾ ಪ್ರದಾನದ ಆಯ್ದಭಾಗವನ್ನು ನಿವೃತ್ತ ಶಿಕ್ಷಕಿ ಶ್ರೀಮತಿ ಪುಷ್ಪಲತ ವಿ.ಕೆ.ಭಟ್ ಅವರು ಸುಶ್ರಾವ್ಯವಾಗಿ ವಾಚನ ಮಾಡಿದರು. ಶಿಕ್ಷಕ ಶ್ರೀಶ ಕುಮಾರ್ ಪಂಜಿತ್ತಡ್ಕ ಅವರು ಸೋದಾಹರಣವಾಗಿ ವ್ಯಾಖ್ಯಾನ ಗೈದರು.


ಸಿರಿಗನ್ನಡ ವೇದಿಕೆಯ ಅಧ್ಯಕ್ಷ ಮತ್ತು ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿ ಶ್ರೀ ವಿ.ಬಿ.ಕುಳಮರ್ವ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶ್ರೀ ವೈ.ವಿ.ರಮೇಶ್ ಅವರು ಅತಿಥಿಗಳನ್ನು ಗೌರವಿಸಿದರು. ಶ್ರೀಮತಿ ಪದ್ಮಿನಿ ಟೀಚರ್ ಅವರು ಧನ್ಯವಾದಗಳನ್ನು ಸಮರ್ಪಿಸಿದರು. ಸುಮಾರು ಇನ್ನೂರೈವತ್ತು ವರ್ಷಗಳ ಹಿಂದೆ ದಿ|ಕುಳಮರ್ವ ವೆಂಕಪ್ಪ ಭಟ್ಟರು ತಾಳೆಯೋಲೆಗಳಲ್ಲಿ ಉಕ್ಕಿನ ಕಂಠದ ಸಹಾಯದಿಂದ ಬರೆದ  "ತೊರವೆ ರಾಮಾಯಣದ" ಬೃಹತ್ ಗ್ರಂಥವು ವೇದಿಕೆಯ ಪ್ರಧಾನ ಆಕರ್ಷಣೆಯಾಗಿತ್ತು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post