|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿಗಳ ಉಜ್ವಲ ಭವಿಷ್ಯದೊಂದಿಗೆ ಹೊಸ ಅವಕಾಶಗಳನ್ನು ರೂಪಿಸುವ ವಿವೇಕಾನಂದ ಪದವಿಪೂರ್ವ ಕಾಲೇಜು

ವಿದ್ಯಾರ್ಥಿಗಳ ಉಜ್ವಲ ಭವಿಷ್ಯದೊಂದಿಗೆ ಹೊಸ ಅವಕಾಶಗಳನ್ನು ರೂಪಿಸುವ ವಿವೇಕಾನಂದ ಪದವಿಪೂರ್ವ ಕಾಲೇಜು


ಪುತ್ತೂರು: ಗ್ರಾಮೀಣ ಪ್ರದೇಶದ ಜನತೆಯ ಶೈಕ್ಷಣಿಕ ಕನಸುಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ 1965 ರಲ್ಲಿ ಪುತ್ತೂರಿನ ಜನತೆಯ ಪ್ರೋತ್ಸಾಹದಿಂದ ರೂಪುಗೊಂಡ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ) ಇದರ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು. ಪುತ್ತೂರು ಮತ್ತು ಆಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪನೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜು ಮೌಲ್ಯಾಧರಿತ ಕಲಿಕೆ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುವ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾಗಿ ಕನ್ನಡ ನಾಡಿನಾದ್ಯಂತ ಗುರುತಿಸಿಕೊಂಡಿದೆ.

 

ವಿವೇಕಾನಂದ ಪದವಿಪೂರ್ವ ಕಾಲೇಜು ಶಿಕ್ಷಣ ಗುಣಮಟ್ಟಕ್ಕೆ ಹೆಸರುವಾಸಿ. ಅನುಭವಿ ಸೃಜನಶೀಲ ಉಪನ್ಯಾಸಕ ತಂಡವೇ ವಿದ್ಯಾಸಂಸ್ಥೆಯ ಹೆಗ್ಗಳಿಕೆ. ನೂರಕ್ಕೂ ಮೀರಿದ ಉಪನ್ಯಾಸಕರು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಇಲ್ಲಿ ಬುನಾದಿಯನ್ನು ಒದಗಿಸುತ್ತಿದ್ದಾರೆ. ಶಿಕ್ಷಣವೆಂದರೆ ಪಾಠವಷ್ಟೇ ಅಲ್ಲ ಎಂಬುದು ಈ ಕಾಲೇಜಿನ ದೃಢ ಸಿದ್ದಾಂತ. ಹಾಗಾಗಿಯೇ ಕಾಲೇಜಿನ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಂತಹ ಮಹತ್ತರವಾದ ಕಾರ್ಯವು ಸದ್ದಿಲ್ಲದೆ ನಡೆಯುತ್ತಲೇ ಇದೆ.

  Upayuktha


ಉತ್ತಮ ಫಲಿತಾಂಶ:

ವಿವೇಕಾನಂದ ವಿದ್ಯಾಸಂಸ್ಥೆಯು ಕಳೆದ ಹಲವು ವರ್ಷಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಾ ಬಂದಿರುವುದು ಗಮನಾರ್ಹ. 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ  ಪದವಿಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ, ಶಶಾಂಕ್ ಬಿ, ಮನೋಜ್ ಎಸ್.ಆರ್, ಅವನೀಶ್ ಕೆ, ಚಿನ್ಮಯಿ,  ಅಪರ್ಣ ಬಾಳಿಗ ಎಂ, ಶ್ರೇಯಸ್ ಎಚ್, ಶ್ರೀರಕ್ಷಾ ಬಿ, ಸಿಂಚನಾ ಲಕ್ಷ್ಮಿ, ಅಭಿಜ್ಞಾಲಕ್ಷ್ಮಿ ಆರು ನೂರು ಅಂಕಗಳಲ್ಲಿ ಆರುನೂರು ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.


ವಿಜ್ಞಾನ ವಿಭಾಗದ ಒಟ್ಟು 462 ಮಂದಿ ವಿದ್ಯಾರ್ಥಿಗಳಲ್ಲಿ 230 ಮಂದಿ ಡಿಸ್ಟಿಂಕ್ಷನ್, 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರೆ ವಾಣಿಜ್ಯ ವಿಭಾಗದ ಒಟ್ಟು 323 ವಿದ್ಯಾರ್ಥಿಗಳಲ್ಲಿ 67 ಮಂದಿ ಡಿಸ್ಟಿಂಕ್ಷನ್ ಹಾಗೂ 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಒಟ್ಟು 37 ವಿದ್ಯಾರ್ಥಿಗಳಲ್ಲಿ 6 ಮಂದಿ ಡಿಸ್ಟಿಂಕ್ಷನ್, 21 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


2021ನೇ ಸಾಲಿನ ಜೆಇಇ ಮೈನ್ಸ್ ಎರಡನೇ ಹಂತದ ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಚಿನ್ಮಯಿ(96.63), ಸಿಂಚನಾಲಕ್ಷ್ಮಿ(96.16), ಗಣೇಶಕೃಷ್ಣ ಬಿ(92.77), ಅವನೀಶ ಕೆ(89.80), ಶ್ರೀರಕ್ಷಾ ಬಿ(88.34), ಪ್ರತೀಕ ಗಣಪತಿ ಪಿ(85.2), ಅಭಿರಾಮ್ ಯು( 84.50), ಪ್ರೀತಂ ಜಿ(83.14) ಪಸರ್ಂಟೈಲ್ ಅಂಕ ಗಳಿಸಿದ್ದಾರೆ.


ನೆಚ್ಚಿನ ಆಯ್ಕೆ:

ರಾಜ್ಯದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳು ವಿವೇಕಾನಂದ ಪದವಿಪೂರ್ವ ಕಾಲೇಜನ್ನು ಆಯ್ಕೆಮಾಡಿಕೊಂಡು ಜ್ಞಾನಾರ್ಜನೆ ಪಡೆಯುತ್ತಿದ್ದಾರೆ. ಪ್ರಸ್ತುತ ಸುಮಾರು 2000 ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ಈ ಶಿಕ್ಷಣ ಸಂಸ್ಥೆ ರಾಜ್ಯದಲ್ಲೇ ಪ್ರತಿಷ್ಠಿತ ಕಾಲೇಜು ಎಂದು ಗುರುತಿಸುವ ಮಟ್ಟಿಗೆ ಬೆಳೆದು ನಿಂತಿದೆ.


ವಿಜ್ಞಾನ, ವಾಣಿಜ್ಯ ಮತ್ತು ಕಲಾವಿಭಾಗಗಳಲ್ಲಿ ಶಿಕ್ಷಣವನ್ನು ನೀಡಲು ಬೇಕಾದ ಕೊಠಡಿಗಳು, ಸುಸಜ್ಜಿತವಾದ ಎಂಟು ಪ್ರಯೋಗಾಲಯಗಳು, ವಿದ್ಯಾಭ್ಯಾಸಕ್ಕೆ ಸೂಕ್ತ ಪರಿಸರವನ್ನು ನಿರ್ಮಿಸುವ ವಸತಿ ನಿಲಯಗಳು ವಿಸ್ತಾರವಾದ ಮೈದಾನ ಮತ್ತು ವ್ಯಾಯಾಮ ಶಾಲೆಗಳನ್ನು ಹೊಂದಿರುವ ಈ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕøತಿ, ಆಧ್ಯಾತ್ಮಿಕ ಪರಂಪರೆ, ದೇಶಪ್ರೇಮ, ಶಿಸ್ತು, ಸಚ್ಚಾರಿತ್ರ್ಯ, ಉತ್ತಮ ಹವ್ಯಾಸ, ಸದಭಿರುಚಿಗಳನ್ನು ಪೋಷಿಸುವ, ಬದುಕಿನ ಸಮಸ್ಯೆಗಳನ್ನು ಎದುರಿಸುವ ಮನೋಭಾವವನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಎಸ್.ಎಸ್ ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ 95% ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಶುಲ್ಕ ವಿನಾಯಿತಿಯಿದೆ.  


ಸಿ.ಇ.ಟಿ, ಜೆ.ಇ.ಇ, ನೀಟ್ ಮತ್ತು ಸಿ.ಎ ಫೌಂಡೇಶನ್ ಕೋರ್ಸ್‍ಗಳ ತರಬೇತಿ:

ಸ್ಪರ್ಧಾತ್ಮಕ ಪರೀಕ್ಷಾ ಘಟಕದ ವತಿಯಿಂದ ಸಿ.ಇ.ಟಿ. ನೀಟ್, ಜೆ.ಇ.ಇ ಮತ್ತು ಇತರ ರಾಷ್ಟ್ರಮಟ್ಟದ ವೈದ್ಯಕೀಯ-ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಿಗೆ ಬೇಕಾದ ಮಾಹಿತಿ ಮತ್ತು ನುರಿತ ಅಧ್ಯಾಪಕರಿಂದ ವಿವಿಧ ರೀತಿಯ ತರಬೇತಿಗಳ ಸೌಲಭ್ಯಗಳಿದ್ದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಫೌಂಡೇಶನ್ ಕೋರ್ಸ್‍ಗಳ ತರಬೇತಿಯ ವ್ಯವಸ್ಥೆಯಿದೆ. ಇದರಲ್ಲಿ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುವುದು. ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಮತ್ತು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವ ಈ ಎರಡು ಪರೀಕ್ಷೆಗಳ ಮೇಲೆ ಈ ವಿದ್ಯಾಸಂಸ್ಥೆಯು ಕೇಂದ್ರಿಕರಿಸಲಿದೆ.


ನಿಧಾನಕಲಿಕೆಯ ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಲ್ಲಿ ಪೂರಕ ತರಗತಿಗಳು ಹಾಗೂ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡಲಾಗುತ್ತದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿಗದಿಪಡಿಸಿದ ಪರೀಕ್ಷೆಗಳಲ್ಲದೆ ಹೆಚ್ಚುವರಿಯಾಗಿ ಎರಡು ಆಂತರಿಕ, ಎರಡು ಪೂರ್ವಸಿದ್ಧತಾ ಪರೀಕ್ಷೆ ಮತ್ತು ಅನೇಕ ತರಗತಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಮೌಲ್ಯಮಾಪನದ ಅಂಕಗಳನ್ನು ಎಸ್.ಎಂ.ಎಸ್  ಮೂಲಕ ಹೆತ್ತವರಿಗೆ ರವಾನಿಸಲಾಗುತ್ತದೆ. ಕಾಲೇಜಿನಲ್ಲಿ ಸುಸಜ್ಜಿತವಾದ ಗ್ರಂಥಾಲಯವಿದ್ದು ಸಾಹಿತ್ಯಕೃತಿಗಳನ್ನು ಅಭ್ಯಾಸ ಮಾಡಿ ಅರಿವಿನ ಪರಿಧಿಯನ್ನು ವಿಸ್ತರಿಸಿಕೊಳ್ಳುವ ಅವಕಾಶವಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನಕ್ಕೆ ಪೂರಕವಾದ ವಿಶೇಷ ಪುಸ್ತಕಗಳನ್ನೂ ಮನನ ಮಾಡಬಹುದಾಗಿದೆ.


ವಿದ್ಯಾರ್ಥಿಗಳಿಗೆ ಉಚಿತ ಆನ್‍ಲೈನ್ ತರಬೇತಿ:

ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಕಾಲೇಜಿನ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಯುಟ್ಯೂಬ್‍ನಲ್ಲಿ  ಉಚಿತ ಆನ್‍ಲೈನ್ ಕೋಚಿಂಗ್ ತರಗತಿಯು ಆರಂಭಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಸುವರ್ಣವಕಾಶವನ್ನು ಒದಗಿಸುತ್ತಿದೆ. ಸ್ಫರ್ಧಾತ್ಮಕ ಪರೀಕ್ಷೆಗಳ ಸಿದ್ದತೆಗಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಿ.ಇ.ಟಿ., ನೀಟ್ ಆನ್‍ಲೈನ್ ತರಗತಿಗಳನ್ನು ನಡೆಸಲಾಗಿದೆ.


ವಿವಿಧ ಸಂಘ:

ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳಿಗೆ ಸೂಕ್ತ ಅವಕಾಶಗಳನ್ನು ನೀಡಿ ಅವರ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ‘ಚಿಗುರು’ ಭಿತ್ತಿಪತ್ರಿಕೆ ಹಾಗೂ ವಾರ್ಷಿಕ ವಿಶೇಷಾಂಕ, ಲಲಿತಾಕಲಾ ಸಂಘ, ವಿಜ್ಞಾನ ಸಂಘ, ವಾಣಿಜ್ಯ ಸಂಘ, ಮಾನವಿಕ ಸಂಘ ಮುಂತಾದವುಗಳು ಕಾರ್ಯ ನಿರ್ವಹಿಸುತ್ತವೆ. ಸಾಹಿತ್ಯಕ, ಸಾಂಸ್ಕøತಿಕ, ವೈಜ್ಞಾನಿಕ ಮತ್ತು ಕ್ರೀಡಾವಲಯಗಳಲ್ಲಿ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಜಾಗತಿಕ ಮಟ್ಟದ ಸಾಧನೆಯನ್ನು ಮಾಡಿ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದ ಪ್ರತಿಭಾವಂತ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.


ರೇಡಿಯೋ ಪಾಂಚಜನ್ಯ:

ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘ ಕಾಲೇಜಿನ ಕ್ಯಾಂಪಸ್ ನಲ್ಲೇ ಸ್ಥಾಪಿಸಿರುವ ರೇಡಿಯೋ ಪಾಂಚಜನ್ಯ 90.8 ಸಮುದಾಯ ಬಾನುಲಿ ಕೇಂದ್ರದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನೇತೃತ್ವದಲ್ಲಿ ಪುಸ್ತಕ ಪರಿಚಯ, ಸಣ್ಣಕಥೆ, ಕವಿತೆ, ಪ್ರಬಂಧ, ಲೇಖನ, ಭಾಷಣ, ಹಾಡು, ಜಾನಪದ ಗೀತೆ, ಭಕ್ತಿಗೀತೆ, ಕಗ್ಗ ಮತ್ತು ವ್ಯಾಖ್ಯಾನ, ಅಡುಗೆ ವಿಶೇಷ, ಯಕ್ಷಗಾನ ತಾಳ ಮದ್ದಳೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಾಗೆಯೇ ವಿದ್ಯಾವರ್ಧಕ ಸಂಘ ರೂಪಿಸಿರುವ ಯಶಸ್ ಸಂಸ್ಥೆಯು ಆವರಣದಲ್ಲೇ ಇದ್ದು ಐಎಎಸ್, ಐಪಿಎಸ್‌ನಂತಹ ಪರೀಕ್ಷೆಗಳಿಗೆ ಮಾರ್ಗದರ್ಶನ ನೀಡುತ್ತಿದೆ.


ಕ್ರೀಡೆಯಲ್ಲಿ ವಿಶಿಷ್ಠ ಸಾಧನೆ:

ವಿಶಾಲವಾದ ಕ್ರೀಡಾಂಗಣವನ್ನು ಹೊಂದಿರುವ ಕಾಲೇಜು ತನ್ನ ಆರಂಭದ ದಿನಗಳಿಂದಲೂ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದು ಹಲವಾರು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನೀಡಿದ ಕೀರ್ತಿಗೆ ಭಾಜನವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಹಾಗೂ ಸಾಧನೆಯ ಛಲ ಹೊಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷವಾದ ತರಬೇತಿಗಳನ್ನು ನೀಡುವುದರ ಜೊತೆಗೆ ಸಾಧನೆಗೆ ಪೂರಕವಾದ ವಾತವರಣವನ್ನು ಕಲ್ಪಿಸಿಕೊಟ್ಟು ವಿದ್ಯಾರ್ಥಿಗಳಿಗೆ ನಿರಂತರ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಇಂತಹ ಪ್ರೋತ್ಸಾಹದ ಫಲವಾಗಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಅದ್ಬುತ ಸಾಧನೆಗೈದು ಸಂಸ್ಥೆಯ ಕೀರ್ತಿಯನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನೆಲೆಗೊಳ್ಳವಂತೆ ಮಾಡಿದ್ದಾರೆ.


ವಿಭಾಗಗಳು:

ವಿಜ್ಞಾನ ವಿಭಾಗ: (ಪಿ.ಸಿ.ಎಂ.ಬಿ /ಪಿ.ಸಿ.ಎಂ.ಸಿ /ಪಿ.ಸಿ.ಎಂ.ಎಸ್ /ಪಿ.ಸಿ.ಎಂ.ಇ)

(ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಬಯೋಲಜಿ, ಕಂಪ್ಯೂಟರ್ ವಿಜ್ಞಾನ, ಇಲೆಕ್ಟ್ರಾನಿಕ್ಸ್)

ವಾಣಿಜ್ಯ ವಿಭಾಗ: (ಎಸ್.ಇ.ಬಿ.ಎ / ಎಸ್.ಸಿ.ಬಿ.ಎ /ಇ.ಸಿ.ಬಿ.ಎ)

(ಇತಿಹಾಸ, ಆರ್ಥಿಕ ಗಣಿತಶಾಸ್ತ್ರ, ವ್ಯಾಪಾರ ಶಿಕ್ಷಣ, ಕಂಪ್ಯೂಟರ್)

ಕಲಾ ವಿಭಾಗ: (ಎಚ್.ಇ.ಪಿ.ಎಸ್)

(ಇತಿಹಾಸ, ಅರ್ಥಶಾಸ್ತ್ರ, ರಾಜಕೀಯ ವಿಜ್ಞಾನ, ಸಮಾಜಶಾಸ್ತ್ರ)

ಭಾಷೆಗಳು: ಇಂಗ್ಲೀಷ್, ಕನ್ನಡ, ಹಿಂದಿ, ಸಂಸ್ಕ್ರತ


ವೈಶಿಷ್ಟ್ಯಗಳು:

ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವುದಕ್ಕಾಗಿ ನಾಲ್ಕು ಅಂತಸ್ತಿನ 40 ಕೊಠಡಿಗಳಿರುವ ನೂತನ ಸುಸಜ್ಜಿತಕಟ್ಟಡವನ್ನು ನಿರ್ಮಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸ್ವತಂತ್ರವಾಗಿ ಪ್ರಯೋಗಜ್ಞಾನ ಬೆಳೆಸುವ ದೃಷ್ಟಿಯಿಂದ ಏಕಕಾಲದಲ್ಲಿ ನೂರು ವಿದ್ಯಾರ್ಥಿಗಳಿಗೆ ಪ್ರಯೋಗ ಮಾಡಲು ಅವಕಾಶವಿರುವ ಜೀವಶಾಸ್ತ್ರ, ಗಣಕ ವಿಜ್ಞಾನ, ರಸಾಯನಶಾಸ್ತ್ರ, ಭೌತಶಾಸ್ತ್ರದ ಪ್ರಯೋಗಾಲಯಗಳನ್ನು ನಿರ್ಮಿಸಲಾಗಿದೆ.

ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲು ಅನುವಾಗುವಂತೆ 700 ವಿದ್ಯಾರ್ಥಿಗಳು ಕುಳಿತುಕೊಳ್ಳಬಹುದಾದ ಸಭಾಭವನ, ಮಾಹಿತಿ ತಂತ್ರಜ್ಞಾನದ ಉಪಯೋಗ ಪಡೆಯುವಂತೆ ಮಾಡಲು ಎಲ್.ಸಿ.ಡಿ  ಪ್ರೊಜೆಕ್ಟರ್ ಇರುವ ಇ- ಕ್ಲಾಸ್ ರೂಮ್‍ನ ವ್ಯವಸ್ಥೆ, 52,000 ಪುಸ್ತಕಗಳನ್ನೂ 150 ವಿವಿಧ ವಿಷಯಗಳನ್ನು ಒಳಗೊಂಡ ನಿಯತಕಾಲಿಕಗಳು ಮತ್ತು 16 ವಿವಿಧ ಭಾಷೆಯ ದಿನಪತ್ರಿಕೆಗಳನ್ನೊಳಗೊಂಡು ತಮಗೆ ಬೇಕಾದ ಪುಸ್ತಕಗಳನ್ನು ತಾವೇ ಆರಿಸುವ ಸೌಕರ್ಯವುಳ್ಳ ವಿಸ್ತಾರವಾದ ಗ್ರಂಥಾಲಯವನ್ನು ನಿರ್ಮಿಸಲಾಗಿದೆ.


ಭಾಷಾ, ವಾಣಿಜ್ಯ, ಜೀವಶಾಸ್ತ್ರ ಮತ್ತು ಗಣಿತ ಶಾಸ್ತ್ರದ ವಿಭಾಗಗಳು ಇದರ ಜೊತೆಗೆ ಸೇರಿಕೊಂಡಿವೆ. ಕನಿಷ್ಠ ಶುಲ್ಕ, ಗರಿಷ್ಠ ಸವಲತ್ತುಗಳು, ವಿಶಾಲವಾದ ತರಗತಿ ಕೊಠಡಿಗಳು, ದೃಶ್ಯ-ಶ್ರವಣ ಬೋಧನೋಪಕರಣಗಳು, ಎಲ್ಲ ಕೊಠಡಿಗಳಲ್ಲಿಯೂ ಸಿಸಿ ಕೆಮರಾಗಳು, ಗ್ರಾಮೀಣ ಪ್ರದೇಶಗಳಿಂದ ಶಾಲಾ ವಾಹನದ ವ್ಯವಸ್ಥೆ, ಪಠ್ಯೇತರ ಚಟುವಟಕೆ ಕ್ಲಬ್‌ಗಳು ಕ್ರೀಡಾಕೂಟಗಳು ಕಾಲೇಜಿನ ವೈಶಿಷ್ಟ್ಯಗಳಾಗಿವೆ.


ಹಾಸ್ಟೆಲ್ ವ್ಯವಸ್ಥೆ:

ದೂರದ ವಿದ್ಯಾರ್ಥಿಗಳಿಗಾಗಿ ಹುಡುಗ-ಹುಡುಗಿಯರಿಗೆ ಪ್ರತ್ಯೇಕವಾದ ಹಾಸ್ಟೆಲ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿಶಾಲವಾದ ಪ್ರತ್ಯೇಕ ತರಗತಿಗಳನ್ನು ಹೊಂದಿದ ಅತ್ಯಾಧುನಿಕ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ  ಕಟ್ಟಡವನ್ನು ಸಂಸ್ಥೆ ಹೊಂದಿದೆ. ಕಲಿಕಾ ನ್ಯೂನತಗಳಿರುವ ವಿದ್ಯಾರ್ಥಿಗಳ ಕುರಿತು ವಿಶೇಷ ನಿಗಾ ವಹಿಸಿ ಕಲಿಕಾ ವಿಧಾನಗಳನ್ನು ಅನುಸರಿಸಿ ಬೋಧಿಸಲಾಗುತ್ತದೆ.


ಎನ್. ಸಿ.ಸಿ ವಿಭಾಗ:

ದೇಶಪ್ರೇಮವನ್ನು ಬೆಳೆಸುವುದರೊಂದಿಗೆ ಸೈನಿಕ ಶಿಕ್ಷಣವನ್ನು ಪಡೆಯುವುದಕ್ಕಾಗಿ  N.C.C. ವಿಭಾಗವು ಸಕ್ರಿಯವಾಗಿ ಕಾರ್ಯಾಚರಿಸುತ್ತಿದ್ದು ಶಿಸ್ತು, ಸಂಯಮ ಮತ್ತು ಕ್ರಿಯಾಶೀಲತೆಯ ಪಾಠವನ್ನು ಹೇಳಿಕೊಡುತ್ತದೆ. ಹೆತ್ತವರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವೆ ನೇರ ಸಂಪರ್ಕವನ್ನು ಕಲ್ಪಿಸುವ ಶಿಕ್ಷಕ-ರಕ್ಷಕ ಸಂಘವು ಹೆತ್ತವರನ್ನು ತನ್ನ ಕಾರ್ಯಗಳಲ್ಲಿ ಸಹಭಾಗಿಯಾಗುವಂತೆ ಮಾಡಿ ಕಾಲೇಜಿನ ಅಭಿವೃದ್ಧಿಯ ಕಡೆ ಕೈಜೋಡಿಸುವ ಅವಕಾಶವನ್ನು ನೀಡುತ್ತದೆ.


ಕಲಿಕೆ, ಕ್ರೀಡೆ, ಸಾಹಿತ್ಯಕ-ಸಾಂಸ್ಕೃತಿಕ ರಂಗಗಳಲ್ಲಿ ನಿರಂತರ ಮುಂಚೂಣಿಯಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು ಕಾಲದ ಅಗತ್ಯಗಳಿಗೆ ತಕ್ಕ ಶಿಕ್ಷಣ ನೀಡುವ ಸಮಗ್ರ ಚಿಂತನೆಯ ಪರಿಪೂರ್ಣ ತಾಣ. ಪಾಠ, ಪ್ರವಚನ, ರ‍್ಯಾಂಕ್‌ ಗಳಿಕೆಗೆ ಸೀಮಿತವಾಗದೆ ಬದುಕಿನ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಬೇಕಾದ ಕೌಶಲವನ್ನು ರೂಢಿಸುವ, ವ್ಯಕ್ತಿತ್ವವನ್ನು ಅರಳಿಸುವ, ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳುವ ಸುಭದ್ರ ಪಂಚಾಂಗ ಇಲ್ಲಿನ ಶಿಕ್ಷಣ ಸ್ವರೂಪದಲ್ಲಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‍ಸೈಟ್ www.vcpuc.vivekanandaedu.org  ಅಥವಾ ss016puc@gmail.com ಅಥವಾ  ಮೊಬೈಲ್ ಸಂಖ್ಯೆ: 9449259330, 9483146330 ನ್ನು ಸಂರ್ಪಕಿಸಬಹುದು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post