|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುಂಜಾಲಕಟ್ಟೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಕುರಿತು ವಿಶೇಷ ಕಾರ್ಯಾಗಾರ

ಪುಂಜಾಲಕಟ್ಟೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಕುರಿತು ವಿಶೇಷ ಕಾರ್ಯಾಗಾರ

 



ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಇಂದು (ಸೆ.21) "ರಾಷ್ಟೀಯ ಹೊಸ ಶಿಕ್ಷಣ ನೀತಿ 2020" ವಿಶೇಷ ಕಾರ್ಯಾಗಾರ ನಡೆಯಿತು.


ಕಾಲೇಜಿನ ಸಹಾಯ ಪ್ರಾಧ್ಯಾಪಕರಾದ ಆಂಜನೇಯ ಎಂ.ಎನ್‌. ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಎನ್‌ಇಪಿ ಯ ಸಂರಚನೆ, ವೈಶಿಷ್ಟತೆ ಹಾಗೂ ಅನುಷ್ಠಾನ, ಪಠ್ಯಕ್ರಮ, ಮೌಲ್ಯಮಾಪನ, ಚಟುವಟಿಕೆ ಮತ್ತು ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುರಿತು ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಸಂತೋಷ್ ಪ್ರಭು ಎಂ ಕಾರ್ಯಕ್ರಮವನ್ನು ನಿರೂಪಿಸಿದರು. IQAC ಯ ಸಂಯೋಜಕರಾದ ಪ್ರೊ. ರವಿಶಂಕರ್. ಬಿ ಹಾಗೂ ಡಾ. ಲೋಕೇಶ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


20 ಉಪನ್ಯಾಸಕರು ಹಾಗೂ 45 ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post