ಮಂಗಳೂರಿನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆ ಉದ್ಘಾಟನೆ

Upayuktha
0

 


ಮಂಗಳೂರು: ಮಂಗಳೂರಿನ ಅಶೋಕನಗರದಲ್ಲಿ‌ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆ ಆರಂಭವಾಗಲಿದ್ದು, ಈ ನೂತನ ಶಾಲೆ ಹಾಗೂ ಕಟ್ಟಡದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.


ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ನೂತನ ಕೊಠಡಿಗಳನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ (ರಿ) ಉಜಿರೆ, ಅಧ್ಯಕ್ಷರಾದ ಸನ್ಮಾನ್ಯ ಡಾ.ಡಿ ವೀರೇಂದ್ರ ಹೆಗ್ಗಡೆ, ನಿಟ್ಟೆ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ನಿಟ್ಟೆ ವಿನಯ್ ಹೆಗ್ಡೆ, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ಕಿರಣ್ ಕೋಡಿಕಲ್, ಗಣ್ಯರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top