ಉಜಿರೆ: ಸಿನಿಮಾ ಒಂದು ಮೂಲ ಸ್ವರೂಪವನ್ನು ಉಳಿಸಿಕೊಂಡು ಕಾಲದಿಂದ ಕಾಲಕ್ಕೆ ವಿಕಸನ ಹೊಂದುತ್ತಿರುವ ಒಂದು ಪ್ರಭಲ ಸಮೂಹ ಮಾಧ್ಯಮ. ಸಿನಿಮಾ ನಿರ್ಮಾಣದ ಮಜಲುಗಳನ್ನು ಅರಿಯಲು, ಪಾಯೋಗಿಕ ತರಬೇತಿ ನೀಡಲು ಈ ಕಾರ್ಯಾಗಾರ ಒಂದು ಅತ್ಯುತ್ತಮ ಯೋಜನೆ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್ ಸತೀಶ್ ಚಂದ್ರ ಅಭಿಪ್ರಾಯ ಪಟ್ಟರು.
ಇಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಬಿವೋಕ್- ಡಿಜಿಟಲ್ ಮಾಧ್ಯಮ ಮತ್ತು ಸಿನಿಮಾ ನಿರ್ಮಾಣ (ಡಿಎಂಎಫ್) ವಿಭಾಗ, ಬೋಧಿ ಪ್ರೊಡಕ್ಷನ್ ಹಾಗೂ ಇನಸ್ಟಿಟ್ಯೂಟ್ ಆಫ್ ಫಿಲ್ಮ್ ಅಂಡ್ ವಿಡಿಯೋ ಟೆಕ್ನಾಲಜಿ, ಪುಣೆ, ಆದಿತ್ಯ ಕ್ರಿಯೇಟಿವ್ ಫಿಲ್ಮ್ ಮೇಕರ್ಸ ಸಂಯುಕ್ತ ಆಶ್ರಯದಲ್ಲಿ ‘ಚಿತ್ರಕಥೆ, ನಿರ್ದೇಶನ ಮತ್ತು ಛಾಯಾಗ್ರಹಣ' ವಿಷಯದ ಕುರಿತು 12 ದಿನಗಳ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಸಿನಿಮಾ ರಂಗದಲ್ಲಿ ತೊಡಗಿಸಿಕೊಳ್ಳಲು ಮುಖ್ಯವಾಗಿ ಆಸಕ್ತಿ, ಉತ್ಸಾಹ, ಸವಾಲುಗಳನ್ನು ಎದುರಿಸುವ ಧೈರ್ಯ ಅವಶ್ಯಕ. ಈ ಕಾರ್ಯಾಗಾರ ಇದಕ್ಕೆ ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಮುಂಬೈನ ಇನ್ಸ್ಟಿಟ್ಯೂಟ್ ಆಫ್ ಫಿಲ್ಮ್ ಅಂಡ್ ವಿಡಿಯೋ ಟೆಕ್ನಾಲಜಿಯ ವ್ಯವಸ್ಥಾಪಕ ನಿರ್ದೇಶಕ, ಎಂ.ಕೆ. ಶಂಕರ್ ದೀಪ ಬೆಳಗುವುದರೊಂದಿಗೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ್ ಹೆಗಡೆ, ಆಸಕ್ತ ವಿದ್ಯಾರ್ಥಿಗಳಿಗೆ ಕಾರ್ಯಾಗಾರಕ್ಕೆ ಶುಭಕೋರಿದರು. ಬೋಧಿ ಪ್ರೊಡಕ್ಷನ್ ಸಂಸ್ಥೆಯ ಸ್ಮಿತೇಷ್ ಬಾರ್ಯ, ಅನೀಶ್ ಪೂಜಾರಿ 12 ದಿನಗಳ ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿದರು.
ಬಿವೋಕ್ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 40ಕ್ಕೂ ಹೆಚ್ಚು ಆಸಕ್ತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದು, ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಪಿ. ವಿಶ್ವನಾಥ್, ಕಾರ್ಯಾಗಾರದ ಸಂಯೋಜಕರಾದ ಮಾಧವ ಹೊಳ್ಳ, ಅಶ್ವಿನಿ ಜೈನ್, ಕೋರ್ಸ್ ಸಂಯೋಜಕ ಸುವೀರ್ ಜೈನ್, ವಿಭಾಗದ ಎಲ್ಲಾ ಉಪನ್ಯಾಸಕರು ಉಪಸ್ಥಿತಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ