ಮಂಗಳೂರು : ಕೇಂದ್ರ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ಮಂಗಳೂರಿನ ನೆಹರೂ ಯುವ ಕೇಂದ್ರವು ಯುವಕ/ಯುವತಿ ಮಂಡಳಿಗಳಿಗೆ ಜಿಲ್ಲಾ ಯುವ ಮಂಡಳ ಪ್ರಶಸ್ತಿಯನ್ನು ಪ್ರತಿವರ್ಷ ನೀಡುತ್ತಿದ್ದು 2020-21ರ ಸಾಲಿನ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ಯುವಕ ಅಥವಾ ಯುವತಿ ಮಂಡಳಗಳು ಜಿಲ್ಲಾ ನೊಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಿಕೊಂಡು, ನೆಹರೂ ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. 2020ರ ಎಪ್ರಿಲ್ 01 2021ರ ಮಾರ್ಚ್ 31 ಒಳಗೆ ಗ್ರಾಮ/ ಪಟ್ಟಣ/ ತಾಲೂಕು ಅಭಿವೃದ್ಧಿಗಾಗಿ ಜನಪರ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ರಾಜ್ಯ ಮಟ್ಟದಲ್ಲಿ ಆಯ್ಕೆಯಾದಲ್ಲೀ 75 ಸಾವಿರ ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 3 ಲಕ್ಷ ರೂ.ಗಳು, ದ್ವಿತೀಯ 1 ಲಕ್ಷ ರೂ.ಗಳು ಹಾಗೂ ತೃತೀಯ 50 ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅರ್ಜಿಯು ರಾಜ್ಯ ಮಟ್ಟದ ಆಯ್ಕೆಗೆ ನಂತರ ರಾಷ್ಟ್ರೀಯ ಮಟ್ಟದ ಆಯ್ಕೆಗೆ ಅರ್ಹತೆ ಪಡೆಯುತ್ತದೆ.
ಮಂಗಳೂರಿನಲ್ಲಿರುವ ನೆಹರೂ ಯುವ ಕೇಂದ್ರದ ಜಿಲ್ಲಾ ಕಚೇರಿಯ ವಿಳಾಸ ಇಂತಿದೆ: ಜಿಲ್ಲಾ ಯುವ ಅಧಿಕಾರಿ, ಕಂದಾಯ ಭವನ, ನೆಲ ಮಹಡಿ, ಡಿ.ಸಿ. ಕಚೇರಿ ಆವರಣ, ಮಂಗಳೂರು – 575001 ಈ ವಿಳಾಸದಲ್ಲಿರುವ ಕಚೇರಿಯಿಂದ ಅರ್ಜಿ ಹಾಗೂ ಸಂಪೂರ್ಣ ಮಾಹಿತಿ ಪಡೆದು, ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
2021ರ ನವೆಂಬರ್ 22 ಅರ್ಜಿ ಸಲ್ಲಿಸುವ ಅಂತಿಮ ದಿನವಾಗಿದೆ. ಜಿಲ್ಲೆಯ ಆಸಕ್ತ ಯುವಕ/ಯುವತಿ ಮಂಡಳಗಳು ಸಂಪೂರ್ಣ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವಂತೆ ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಟರ್ ಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ: 0824-2422264, ಮೊ:9620402893 ಗೆ ಸಂಪರ್ಕಿಸಬಹುದು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ