ಶ್ರೀ ಭಾರತೀ ಕಾಲೇಜು ನಂತೂರಿನಲ್ಲಿ ರಕ್ತದಾನ ಶಿಬಿರ

Upayuktha
0

 


ಮಂಗಳೂರು: ದಿನಾಂಕ 28-11-2021ನೇ ಭಾನುವಾರ ನಗರದ ನಂತೂರಿನಲ್ಲಿರುವ ಶ್ರೀ ಭಾರತೀ ಕಾಲೇಜು, ಇಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಮಂಗಳೂರು ಹವ್ಯಕ ಸಭಾ ಇದರ ಸಂಯುಕ್ತ ಆಶ್ರಯದಲ್ಲಿ ರಕ್ತನಿಧಿ, ಸರಕಾರಿ ವೆನ್‌ಲಾಕ್ ಆಸ್ಪತ್ರೆ ಇದರ ಸಹಕಾರದೊಂದಿಗೆ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ.  


ಆಸಕ್ತರು ರಕ್ತದಾನ ಮಾಡಲು ಅವಕಾಶವಿದೆ ಎಂದು ಕಾರ‍್ಯಕ್ರಮದ ಸಂಯೋಜಕರಾದ, ಚೂಂತಾರು ಸರೋಜಿನಿ ಪ್ರತಿಷ್ಠಾನದ ಕಾರ‍್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top