ಡಾ|| ಪಿ ಎಸ್ ಶಂಕರ ಪ್ರತಿಷ್ಠಾನವು 2000ನೇ ಇಸವಿಯಿಂದ ಕನ್ನಡದ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಗಳನ್ನು ಮತ್ತು ಕೊಡುಗೆಗಳನ್ನು ಗುರುತಿಸಿ ಶ್ರೇಷ್ಠ ವೈದ್ಯಕೀಯ ಸಾಹಿತ್ಯ ಪ್ರಶಸ್ತಿಯನ್ನು ನೀಡುತ್ತಿದ್ದಾರೆ.
ಈ ವರ್ಷದ 2021ನೇ ಸಾಲಿನ ಶ್ರೇಷ್ಠ ವೈದ್ಯಕೀಯ ಸಾಹಿತ್ಯ ಪ್ರಶಸ್ತಿಯನ್ನು ದಿನಾಂಕ 01-01-2022ರಂದು ಕಲಬುರ್ಗಿಯಲ್ಲಿ ಡಾ|| ಮುರಲೀ ಮೋಹನ್ ಚೂಂತಾರು ಇವರಿಗೆ ನೀಡಿ ಗೌರವಿಸಲಾಗುವುದು. ಡಾ|| ಮುರಲೀ ಮೋಹನ್ ಚೂಂತಾರು ಈವರೆಗೆ 12 ವೈದ್ಯಕೀಯ ಪುಸ್ತಕಗಳು, 1000ಕ್ಕೂ ಹೆಚ್ಚು ಆರೋಗ್ಯ ಜಾಗೃತಿ ಲೇಖನಗಳನ್ನು ಬರೆದಿದ್ದಾರೆ. ತಮ್ಮ ಲೇಖನಗಳ ಮುಖಾಂತರ ಅನೇಕರಲ್ಲಿ ಜಾಗೃತಿಯನ್ನು ಮೂಡಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ