ರಾಷ್ಟ್ರೀಯ ಐಕ್ಯತಾ ಸಪ್ತಾಹ

Upayuktha
0


ಮಂಗಳೂರು: ದಿನಾಂಕ 19-11-2021ನೇ ಶುಕ್ರವಾರದಂದು ಕೇಂದ್ರ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿ ಮೇರಿಹಿಲ್, ಮಂಗಳೂರು ‘ರಾಷ್ಟ್ರೀಯ ಐಕ್ಯತಾ ಸಪ್ತಾಹ’ ವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರ ಸಮ್ಮುಖದಲ್ಲಿ ಆಚರಿಸಲಾಯಿತು. 


ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಐಕ್ಯತಾ ಪ್ರತಿಜ್ಞೆಯನ್ನು ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಗೃಹರಕ್ಷಕರಿಗೆ ಬೋಧಿಸಿದರು. ಈ ಸಂದರ್ಭದಲ್ಲಿ ಕಛೇರಿಯ ಉಪ ಸಮಾದೇಷ್ಟರಾದ ರಮೇಶ್, ಕಛೇರಿ ಅಧೀಕ್ಷಕರು ಶ್ರೀ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್, ದಲಾಯತ್ ಮೀನಾಕ್ಷಿ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಪ್ರಮಾಣ ವಚನವನ್ನು ಮಾಡಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top