ವೈಜ್ಞಾನಿಕ ಕರ ಪ್ರಕ್ಷಾಲನ ಪ್ರಾತ್ಯಕ್ಷಿಕೆ

Upayuktha
0



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ. ಪೂ ಕಾಲೇಜಿನ ಸಾಮಾಜಿಕ ಜವಾಬ್ದಾರಿ ಉಪಕ್ರಮಗಳ ವೇದಿಕೆ ಹಾಗೂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಜಂಟಿ ಆಶ್ರಯದಲ್ಲಿ ವೈಜ್ಞಾನಿಕ ಕರ ಪ್ರಕ್ಷಾಲನ ವಿಧಾನದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.



ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳರು ಕೈ ತೊಳೆದುಕೊಳ್ಳುವ ಮಹತ್ವ ತಿಳಿಸಿ ಪ್ರಾತ್ಯಕ್ಷಿಕೆ ನಡೆಸಿದರು. ವಿದ್ಯಾರ್ಥಿಗಳಾದ ಪ್ರತಿಷ್ಠಾ ಹಾಗೂ ವಿಕಾಸ್ ಭಟ್ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದರು.


ಸಾಮಾಜಿಕ ಜವಾಬ್ದಾರಿ ಉಪಕ್ರಮಗಳ ವೇದಿಕೆಯ ಪ್ರಧಾನ ಸಂಯೋಜಕ ಹಾಗೂ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಮಹೇಶ ಕುಮಾರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿ ಶ್ರೀಚರಣ್ ಎಂ.ಎಸ್. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top