ಶ್ರೀನಿವಾಸವನಂ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ, ಶ್ರೀನಿವಾಸವನಂ ಇಲ್ಲಿನ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗವು ಕನ್ನಡ ರಾಜ್ಯೋತ್ಸವ ಸಂಭ್ರಮದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ.
'ದ್ರಾವಿಡ ಭಾಷೆಗಳ ಸಾಹಿತ್ಯ: ಸಾಮ್ಯ ಮತ್ತು ಅನನ್ಯತೆ' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಖ್ಯಾತ ವಿಮರ್ಶಕರು ಹಾಗೂ ನಿವೃತ್ತ ಪ್ರಾಧ್ಯಾಪಕರು ಆಗಿರುವ ಡಾ. ಹೆಚ್ ಎಸ್ ರಾಘವೇಂದ್ರ ರಾವ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.
ನವೆಂಬರ್ 25ರಂದು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಗೂಗಲ್ ಮೀಟ್ http://meet.google.com/efw.agby.xnp ಮೂಲಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಭಾಗವಹಿಸುವ ಎಲ್ಲರಿಗೂ ವಿದ್ಯುನ್ಮಾನ ಪ್ರಮಾಣ ಪತ್ರಗಳನ್ನು ನೀಡಲಾಗುವುದು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ