ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಸರ್ವಜಿತ್ ಅವರು ಮಂಡಿಸಿದ "ಡೆವಲಪಿಂಗ್ ಥಲೋಸೆಯನಿಸ್ ಬೇಸ್ಡ್ ಸೂಪರ್ಮಾಲಿಕ್ಯುಲರ್ ಸಿಸ್ಟಮ್ ಫಾರ್ ಸೆನ್ಸಿಂಗ್ ಅಪ್ಲಿಕೇಶನ್ " ಎಂಬ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.
ಮಣಿಪಾಲ್ ತಾಂತ್ರಿಕ ವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಫಸಿವುಲ್ಲ ಅವರ ಮಾರ್ಗದರ್ಶನದಲ್ಲಿ ಸರ್ವಜೀತ್ ಅವರು ಈ ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರು ಹರಿಹರಪುರ ಅನ್ನಪೂರ್ಣೇಶ್ವರಿ ಹೋಟೆಲ್ ಮಾಲೀಕರಾದ ಸುಧಾಕರ ಗೌಡ ಮತ್ತು ಜಯಂತಿ ಅವರ ಪುತ್ರ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ