ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ದೇರ್ಲ ಆಯ್ಕೆ

Upayuktha
0



ಪುತ್ತೂರು: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ದೇರ್ಲ ಆಯ್ಕೆಯಾಗಿದ್ದಾರೆ. ಡಿಸೆಂಬರ್ 18ರಂದು ಶ್ರವಣಬೆಳಗೊಳದ ಜೈನ ಮಠದ ಆವರಣದ ತುಳುವ ವೇದಿಕೆಯಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.


ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿರುವ ಅಖಿಲಾ ಶೆಟ್ಟಿ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿ ಭಾಷಣ, ಪ್ರಬಂಧ, ಕಥೆ ಹಾಗೂ ಕವನ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.


ಬರಹಗಾರ್ತಿಯಾಗಿಯೂ ಗುರುತಿಸಿಕೊಂಡು ತಮ್ಮ ಬರಹಗಳ ಮೂಲಕ ಇದುವರೆಗೂ ಐವತ್ತಕ್ಕೂ ಹೆಚ್ಚು ಸಾಧಕರ ಪರಿಚಯ ಮಾಡಿರುತ್ತಾರೆ. ಕನ್ನಡ ಕರಾವಳಿ ಸಮ್ಮಿಲನ ವೇದಿಕೆಯ ಅಧ್ಯಕ್ಷೆಯಾಗಿದ್ದು ಇವರ ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಈ ಗೌರವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಇವರು ದೇರ್ಲ ಜಯರಾಮ ಶೆಟ್ಟಿ ಹಾಗೂ ಇಂದಿರಾ. ಜೆ ಶೆಟ್ಟಿ ದಂಪತಿ ಪುತ್ರಿ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top