ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ, ನೀಟ್ ಸಾಧಕಿ ಸಿಂಚನಲಕ್ಷ್ಮಿ ಸಂದರ್ಶನ

Upayuktha
0

 

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೀಟ್ ಸಾಧಕಿ ಸಿಂಚನಲಕ್ಷ್ಮಿ ಅವರನ್ನು ಕಾಲೇಜಿನ ವಿಜ್ಞಾನ ಸಂಘ ವಿಸ್ಮಯದ ವತಿಯಿಂದ ಸಂದರ್ಶಿಸಲಾಯಿತು. ನಿರಂತರ ಕಲಿಕೆ, ಪುನರ್ಮನನ, ಸಮಯ ಹೊಂದಾಣಿಕೆ ಜೊತೆಗೆ ತನ್ನ ಕಾಲೇಜಿನ ಉಪನ್ಯಾಸಕರ ಪ್ರೋತ್ಸಾಹ ಹಾಗೂ ಹೆತ್ತವರ ಒತ್ತಡ ರಹಿತ ಸಹಕಾರ ಇವೆಲ್ಲಾ ತಮ್ಮ ಸಾಧನೆಗೆ ಸಹಕಾರಿಯಾಯಿತೆಂದು ಈ ಸಂದರ್ಭದಲ್ಲಿ ತಿಳಿಸಿದರು.


ಸಂದರ್ಶನವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸ್ತುತಿ, ಪ್ರತೀಕ್ಷಾ, ಪೂಜಿತ, ಅಕ್ಷಯ್ ನಡೆಸಿದರು. ಕಾರ್ಯಕ್ರಮದಲ್ಲಿ ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀಮತಿ ನಳಿನಕುಮಾರಿ, ಉಪನ್ಯಾಸಕಿ ಸ್ನೇಹಾ ಬಿ.ಎಸ್ ಹಾಗೂ ಸಿಂಚನಲಕ್ಷ್ಮಿಯ ಹೆತ್ತವರು ಭಾಗಿಯಾಗಿದ್ಧರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top