ಹುಟ್ಟೂರಿನಲ್ಲಿ ಶ್ರೀ ವಿಶ್ವೇಶತೀರ್ಥರ ಪುತ್ಥಳಿ; ಸ್ಮಾರಕ ಧ್ಯಾನಕೇಂದ್ರ ಲೋಕಾರ್ಪಣೆ

Upayuktha
0

ರಾಮಕುಂಜ: ದ.ಕ‌ ಜಿಲ್ಲೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ದಶಕಗಳ ಹಿಂದೆ ಕೀರ್ತಿಶೇಷ ಪದ್ಮವಿಭೂಷಣ ಪುರಸ್ಕೃತ, ಯತಿ ಶ್ರೇಷ್ಠರಾದ ಶ್ರೀ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಿಂದ ಸ್ಥಾಪಿಸಲ್ಪಟ್ಟು ಯಶಸ್ವಿಯಾಗಿ ಮುನ್ನಡೆಸಲ್ಪಡುತ್ತಿರುವ ಶ್ರೀರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪುತ್ಥಳಿ ಮತ್ತು ಅವರ ಸಂಸ್ಮರಣಾರ್ಥ ನಿರ್ಮಿಸಲಾಗಿರುವ ಧ್ಯಾನಕೇಂದ್ರದ ಲೋಕಾರ್ಪಣೆ ಯು ಬುಧವಾರ ನೆರವೇರಿತು.‌


ಉಡುಪಿಯ ಶ್ರೀ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೂ ಶ್ರೀ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಪುತ್ಥಳಿ ಅಮಾವರಣ ಮತ್ತು ಧ್ಯಾನಕೇಂದ್ರ ಉದ್ಘಾಟಿಸಿದರು.‌ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಮಠದ ದಿವಾನರಾದ ಎಂ ರಘುರಾಮಾಚಾರ್ಯ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಶಿಕ್ಷಕೇತರ ಸಿಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.‌



   


ತೀರಾ ಹಿಂದುಳಿದ ಗ್ರಾಮೀಣ ಪ್ರದೇಶವಾಗಿರುವ ರಾಮಕುಂಜದಲ್ಲಿ ಶ್ರೀಗಳು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಈ ಹಳ್ಳಿ ಪ್ರದೇಶದ ಅಸಂಖ್ಯ ಬಡ ಮಕ್ಕಳಿಗೆ ಮಕ್ಕಳಿಗೆ ಪ್ರಾಥಮಿಕ ಪ್ರೌಢ, ಪದವಿಪೂರ್ವ ಹಾಗೂ ಪದವಿ  ವರೆಗಿನ ಉತ್ತಮ ಶಿಕ್ಷಣ ಒದಗುವಂತೆ ಮಾಡಿದ್ದು, ಪ್ರಸ್ತುತ ಇಲ್ಲಿ ಎರಡೂವರೆ ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top