|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರಿನಲ್ಲಿ ನೂತನ ಹವ್ಯಕ ಸಭಾಭವನ ಜ.2ರಂದು ಲೋಕಾರ್ಪಣೆ

ಪುತ್ತೂರಿನಲ್ಲಿ ನೂತನ ಹವ್ಯಕ ಸಭಾಭವನ ಜ.2ರಂದು ಲೋಕಾರ್ಪಣೆ




ಮಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಪುತ್ತೂರಿನಲ್ಲಿ ನೂತನವಾಗಿ ನಿರ್ಮಿಸಿರುವ 'ಹವ್ಯಕ ಸಭಾಭವನ' ದ ಉದ್ಘಾಟನಾ ಕಾರ್ಯಕ್ರಮ ಜನವರಿ 2 ಭಾನುವಾರ 11.30ಕ್ಕೆ ನಡೆಯಲಿದೆ. 


ಶ್ರೀರಾಮಚಂದ್ರಾಪುರಮಠದ ಗೋಕರ್ಣಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲಿದ್ದು, ಕೇಂದ್ರ ಮಾಜಿ ಸಚಿವರಾದ ಡಿ.ವಿ ಸದಾನಂದ ಗೌಡ ಸಭಾಭವನವನ್ನು ಉದ್ಘಾಟಿಸಲಿದ್ದಾರೆ.


ಅಭ್ಯಾಗತರಾಗಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಸಚಿವರಾದ ಎಸ್ ಅಂಗಾರ, ಸುನಿಲ್ ಕುಮಾರ್, ಸಂಸದ ಹಾಗು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಟಂದೂರು, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಪುತ್ತೂರು ನಗರಸಭಾಧ್ಯಕ್ಷ ಜೀವಂಧರ್ ಜೈನ್, ಹವ್ಯಕ ಮಹಾಮಂಡಲದ ಆರ್ ಎಸ್ ಹೆಗಡೆ, ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಅಧ್ಯಕ್ಷರಾದ ಕೇಶವಪ್ರಸಾದ ಮುಳಿಯ ಮುಂತಾದವರು ಭಾಗವಹಿಸಲಿದ್ದು, ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.

ಸಭಾಭವನ ಸಮರ್ಪಣಮ್ ಮೂಲಕವಾಗಿ ಈ ಸಭಾಭವನವು ಸಮಾಜಕ್ಕೆ ಸಮರ್ಪಿತವಾಗುತ್ತಿದೆ.  

ಸ್ಥಳ: ಹವ್ಯಕ ಸಭಾಭವನ

ಭಾರತೀ ನಗರ, ಕರ್ಮಲ, ಪುತ್ತೂರು.

ದಿನಾಂಕ: 02.01.2022 ಭಾನುವಾರ 11.30 ಕ್ಕೆ

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم