|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ


ಮೇರಿಹಿಲ್‌: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ಗೃಹರಕ್ಷಕರಾದ ದಿ. ಶಿವಾನಂದ ಇವರು ಇತ್ತೇಚೆಗೆ ರಸ್ತೆ ಅಪಘಾತದಿಂದ ಮೃತಹೊಂದಿರುತ್ತಾರೆ. ಇವರ ಕುಟುಂಬದವರಿಗೆ ಕೇಂದ್ರ ಕಛೇರಿಯಿಂದ ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನವನ್ನು ನೀಡಿರುತ್ತಾರೆ. ಈ ನಿಟ್ಟಿನಲ್ಲಿ ದಿನಾಂಕ 10-01-2022ನೇ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರು ದಿ. ಶಿವಾನಂದ ರವರ ತಾಯಿ ಮಹಾದೇವಿ ಇವರಿಗೆ ರೂಪಾಯಿ 15,000/- ಮೌಲ್ಯದ ಚೆಕ್ ನೀಡಿದರು.


ಈ ಸಂದರ್ಭದಲ್ಲಿ ಕಛೇರಿಯ ಉಪಸಮಾದೇಷ್ಟರಾದ ರಮೇಶ್, ಅಧೀಕ್ಷಕರಾದ ರತ್ನಾಕರ್, ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ.ಎಸ್, ಶಿವಾನಂದ ರವರ ತಮ್ಮ ಪುಂಡಲಿಕ, ಗೃಹರಕ್ಷಕರಾದ ಸುಲೋಚನಾ, ಜಯಲಕ್ಷ್ಮಿ, ದಿವಾಕರ್, ದುಷ್ಯಂತ್ ಮುಂತಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post