ಮೂಡಬಿದ್ರೆ: ಜನವರಿ 16ರಂದು ಭಾನುವಾರದಂದು, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರು ಮೂಡಬಿದ್ರೆ ಗೃಹರಕ್ಷಕದಳ ಕಛೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮೂಡಬಿದ್ರೆ ಘಟಕಕ್ಕೆ ಇನ್ಫೋಸಿಸ್ ವತಿಯಿಂದ ನೀಡಲಾದ ಕಂಪ್ಯೂಟರ್ ಅನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರು ಮೂಡಬಿದ್ರೆ ಘಟಕದ ಪ್ರಭಾರ ಘಟಕಾಧಿಕಾರಿಯಾದ ಶ್ರೀ ಪಾಂಡುರಾಜ್ ಇವರಿಗೆ ಹಸ್ತಾಂತರಿಸಿದರು.
ಇನ್ನು ಮುಂದಿನ ದಿನಗಳಲ್ಲಿ ವಾರದ ಕವಾಯತಿನ ಹಾಜರಾತಿಗಳನ್ನು ಕಂಪ್ಯೂಟರ್ ಮೂಲಕವೆ ಕಳುಹಿಸುವಂತೆ ಸೂಚಿಸಿದರು ಮತ್ತು ಕಾಗದ ರಹಿತ ಕಛೇರಿ ಆಗಬೇಕೆಂದು ನುಡಿದರು. ಈ ಸಂದರ್ಭದಲ್ಲಿ ಮೂಡಬಿದ್ರೆ ಘಟಕದ ಗೃಹರಕ್ಷಕ ಗೃಹರಕ್ಷಕಿಯರು ಮತ್ತು ಮಂಗಳೂರು ಘಟಕದ ಗೃಹರಕ್ಷಕರಾದ ದಿವಾಕರ್ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ