ಪುತ್ತೂರು: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯಗಳ ವತಿಯಿಂದ ಬೆಳದಿಂಗಳ ಊಟ ವಿಶೇಷ ಕಾರ್ಯಕ್ರಮವನ್ನು ವಿವೇಕಾನಂದ ಪದವಿ ಕಾಲೇಜಿನ ಮುಂಭಾಗದಲ್ಲಿ ಜ.16 ರಂದು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಸತಿ ನಿಲಯಗಳ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಪ್ರಭು ವಹಿಸಿದ್ದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಜಿ ಅಚ್ಯುತ ನಾಯಕ್, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಂಚಾಲಕ ಕೃಷ್ಣಪ್ರಸಾದ್ ನಡುಸಾರ್ ಉಪಸ್ಥಿತರಿದ್ದರು.
ವಸತಿ ನಿಲಯದ ವಿದ್ಯಾರ್ಥಿನಿಯರು ನೃತ್ಯ ಸಂಗೀತ ಕಿರುನಾಟಕಗಳನ್ನೊಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರೂ ಜೊತೆಯಾಗಿ ಬೆಳದಿಂಗಳ ಊಟವನ್ನು ಸೇವಿಸಿದರು.
ಈ ಸಂದರ್ಭದಲ್ಲಿ ವಸತಿನಿಲಯದ ಆಡಳಿತಾಧಿಕಾರಿ ಲಕ್ಷ್ಮೀಪ್ರಸಾದ್ , ಕಾರ್ಯದರ್ಶಿಗಳಾದ ಶಿವಪ್ರಸಾದ್, ಮುಖ್ಯ ನಿಲಯ ಪಾಲಕ ಗೋವಿಂದರಾಜ ಶರ್ಮ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿಅನುಷಾ ಮತ್ತು ತಂಡ ಪ್ರಾರ್ಥಿಸಿದರು. ವಸತಿನಿಲಯದ ವಿದ್ಯಾರ್ಥಿನಿಯರಾದ ಸಾಕ್ಷಿತಾ ಸ್ವಾಗತಿಸಿ, ರುಚಿತಾ ವಂದಿಸಿದರು. ವಿದ್ಯಾರ್ಥಿನಿ ಮೈಥಿಲಿ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ