ಪುತ್ತೂರು: ನಗರಸಭೆ ಆಡಳಿತ, ಅಧಿಕಾರಿಗಳು, ಪೌರ ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ರಾಜ್ಯದಲ್ಲಿ ಸ್ವಚ್ಛತೆ ಮತ್ತು ಜನರ ಆರೋಗ್ಯದಲ್ಲಿ ಪುತ್ತೂರು ನಗರಸಭೆ ನಂ.1 ಆಗಬೇಕು ಎಂದು ಶಾಸಕ ಸಂಜೀವ ಮಠಂದೂರು ಆಶಯ ವ್ಯಕ್ತಪಡಿಸಿದರು.
ನಗರಸಭೆ ವತಿಯಿಂದ ಸ್ವಚ್ಛ ಭಾರತ್ ಯೋಜನೆ, 14ನೇ ಹಣಕಾಸು ಯೋಜನೆಯಡಿಯಲ್ಲಿ ಬನ್ನೂರು ಡಂಪಿಂಗ್ ಯಾರ್ಡ್ನಲ್ಲಿ ಪೌರ ಕಾರ್ಮಿಕರ ವಿಶ್ರಾಂತಿಗಾಗಿ ರೂ. 17 ಲಕ್ಷ ವೆಚ್ಚದಲ್ಲಿ ನಿಮಾಣಗೊಂಡ ಪುರುಷ ಮತ್ತು ಮಹಿಳೆಯರ ಕೊಠಡಿಗಳನ್ನು ಇಂದು (ಜ.24) ಬೆಳಿಗ್ಗೆ ಅವರು ಉದ್ಘಾಟಿಸಿದರು.
ಪೌರ ಕಾರ್ಮಿಕರು ಕಸ ವಿಲೇವಾರಿ ಮಾಡಲು ಬನ್ನೂರು ಡಂಪಿಂಗ್ ಯಾರ್ಡ್ಗೆ ಬಂದಾಗ ಇಲ್ಲಿ ಕಸ ವಿಂಗಡಣೆ ಮಾಡಿ ವಿಶ್ರಾಂತಿ ಮಾಡಿಕೊಳ್ಳಲು ಕೊಠಡಿ ನಿರ್ಮಾಣ ಮಾಡುವ ಮೂಲಕ ಕಾರ್ಮಿಕರು ಕೂಡಾ ಅವರ ಆರೋಗ್ಯ ಕಾಪಾಡುವ ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಗರಸಭೆ ಕಾಳಜಿ ವಹಿಸಿರುವುದು ಉತ್ತಮ ವಿಚಾರ. ಇಲ್ಲಿ ಒಂದಷ್ಟು ಕಸವನ್ನು ವಿಂಗಡನೆ ಮಾಡಿ ಮರುಬಳಕೆ ಮಾಡುವ ದೃಷ್ಟಿಯಿಂದ ಹೊಸ ಹೊಸ ಯೋಜನೆಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನ ಪುತ್ತೂರು ನಗರಸಭೆ ರಾಜ್ಯ ಮತ್ತು ರಾಷ್ಟದಲ್ಲಿ ಗುರುತಿಸಿಕೊಳ್ಳಬೇಕೆಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಪೌರಾಯುಕ್ತ ಮಧು ಎಸ್. ಮನೋಹರ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆ ಸದಸ್ಯ ಶೀನಪ್ಪ ನಾಯ್ಕ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ರೋಟರಿ ಪೂರ್ವ ಸ್ವಚ್ಛ ಭಾರತ ಯೋಜನಾ ಟ್ರಸ್ಟ್ ನಿರ್ದೇಶಕ ಡಾ| ರಾಜೇಶ್ ಬೆಜ್ಜಂಗಳ ಮತ್ತು ಪೌರ ಕಾರ್ಮಿಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ