ಮಂಗಳೂರು: ಜನವರಿ 20 ಗುರುವಾರದಂದು ಮಂಗಳೂರು ಘಟಕಕ್ಕೆ ಇನ್ಫೋಸಿಸ್ ವತಿಯಿಂದ ನೀಡಲಾದ ಕಂಪ್ಯೂಟರ್ನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರು ಮಂಗಳೂರು ಘಟಕದ ಘಟಕಾಧಿಕಾರಿಯಾದ ಶ್ರೀ ಮಾರ್ಕ್ಶೇರಾ ಇವರಿಗೆ ಹಸ್ತಾಂತರಿಸಿದರು. ಹಾಗೂ ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಘಟಕಗಳ ವಾರದ ಕವಾಯತಿನ ಹಾಜರಾತಿಗಳನ್ನು ಕಂಪ್ಯೂಟರ್ ಮೂಲಕವೇ ಕಳುಹಿಸುವಂತೆ ಸೂಚಿಸಿದರು.
ಕಾಗದ ರಹಿತ ಕಛೇರಿ ಆಗಬೇಕೆಂದು ನುಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ಶ್ರೀ ರಮೇಶ್, ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್., ಮಂಗಳೂರು ಘಟಕದ ಸಾರ್ಜೆಂಟ್ ಸುನಿಲ್ ಕುಮಾರ್, ದಿವಾಕರ, ದುಷ್ಯಂತ್ ರೈ, ಸುಲೋಚನಾ, ವಾರಿಜಾ, ಸುಮಿತ್ರ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ