ಪುತ್ತೂರು ಡಿ. 21: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗ, ಒಂದು ದಿನದ ಗಾಜಿನ ತಯಾರಿಕೆಯ ಕಾರ್ಯಗಾರ ನಡೆಸಲಾಯಿತು.
ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜೇಂದ್ರನ್, ವಿದ್ಯಾರ್ಥಿಗಳಿಗೆ ಗಾಜಿನ ತಯಾರಿಕೆಯ ವಿಧಾನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ, ಇರುಮಂಜ ಶಂಕರ ಜೋಯಿಸ, ವಿವಿಧ ತರಹದ ಗಾಜು ಹಾಗೂ ಅವುಗಳ ಉಪಯೋಗದ ಬಗೆಗೆ ವಿವರಿಸಿದರು. ಕಾರ್ಯ ಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಉಪಸ್ಥಿತರಿದ್ದರು.
ವಿದ್ಯಾ ರ್ಥಿನಿಯರು ಶ್ರಿವರ್ಧ, ಜ್ಯೋತಿ, ಅಪೇಕ್ಷಾ ಪ್ರಾರ್ಥಿಸಿ, ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣಕಾರಂತ ಸ್ವಾ ಗತಿಸಿ, ವಿಜ್ಞಾನ ಸಂಘದ ಕಾರ್ಯದರ್ಶಿ, ವಿಭಾಗದ ಉಪನ್ಯಾಸಕಿ ನಿಶಾ ಎನ್ ವಂದಿಸಿದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಅಕ್ಷಿತಾ ಎಂ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment