|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬಿಕಾ ಪತ್ರಿಕೋದ್ಯಮದ ಅನುಪಮ ವೇದಿಕೆಯಲ್ಲಿ ಪ್ರತಿಭಾ ಕಾರ್ಯಕ್ರಮ

ಅಂಬಿಕಾ ಪತ್ರಿಕೋದ್ಯಮದ ಅನುಪಮ ವೇದಿಕೆಯಲ್ಲಿ ಪ್ರತಿಭಾ ಕಾರ್ಯಕ್ರಮ

ದೊರಕುವ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು : ಚಂದ್ರಕಾಂತ ಗೋರೆ


ಪುತ್ತೂರು: ವಿದ್ಯಾರ್ಥಿಗಳಲ್ಲಿ ಹಲವಾರು ಸುಪ್ತ ಪ್ರತಿಭೆಗಳಿವೆ. ಆ ಪ್ರತಿಭೆಗಳ ಪ್ರದರ್ಶನಕ್ಕೆ ವೇದಿಕೆಗಳು ಅತ್ಯವಶ್ಯಕವಾಗಿದೆ. ಹಾಗಾಗಿ ವಿದ್ಯಾರ್ಥಿಯು ತನ್ನ ಜೀವನದಲ್ಲಿ ದೊರಕುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಬೇಕು. ಪ್ರತಿಭೆಯನ್ನು ಪ್ರದರ್ಶಿಸುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ್ ಗೋರೆ ಹೇಳಿದರು.


ಅವರು ಕಾಲೇಜಿನ ಪ್ರತಿಕೋದ್ಯಮ ವಿಭಾಗದ ಆಶ್ರಯದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಯೋಜಿಸುವ ಅನುಪಮ ಪ್ರತಿಭಾ ವೇದಿಕೆಯಲ್ಲಿ ಶುಕ್ರವಾರದಂದು ನಡೆದ 'ಚೀಟಿ ಹೆಕ್ಕಿ ಅಭಿನಯಿಸುವುದು' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಮನುಷ್ಯನು ಹಲವಾರು ದುಃಖ ದುಮ್ಮಾನಗಳನ್ನು ಹೊಂದಿರುತ್ತಾನೆ. ಮಾನಸಿಕವಾಗಿ ಬೇಸರಗಳನ್ನು ಅನುಭವಿಸುತ್ತಿರುತ್ತಾನೆ. ಅಂತಹ ಭಾವನೆಗಳನ್ನು ವ್ಯಕ್ತಪಡಿಸಲು, ಮನಸ್ಸಿನ ವಿಚಾರಗಳನ್ನು ಹೊರತೆಗೆಯಲು ಪ್ರತಿಭಾ ವೇದಿಕೆಗಳು ಅವಕಾಶವನ್ನು ನೀಡುತ್ತವೆ. ವೇದಿಕೆಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಚೈತನ್ಯಭರಿತವಾಗುತ್ತದೆ ಮತ್ತು ಉಲ್ಲಾಸಗೊಳ್ಳುತ್ತದೆ ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಮಾತನಾಡಿ, ಪದವಿ ವಿದ್ಯಾಲಯಗಳು ಪಠ್ಯದ ಜೊತೆಗೆ, ಪಠ್ಯೇತರ ವಿಷಯಗಳಿಗೂ ಸಮಾನ ಮಹತ್ವವನ್ನು ನೀಡುತ್ತವೆ. ವಿದ್ಯಾರ್ಥಿಗಳು ಮುಜುಗರದ ಕಟ್ಟೆಯನ್ನು ಒಡೆದು ಮುಕ್ತವಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಾನಾ ಬಗೆಯ ಚಟುವಟಿಕೆಗಳು ತಮ್ಮನ್ನು ತಾವು ತಿದ್ದಿಕೊಳ್ಳಲಿರುವ ವೇದಿಕೆಗಳೆಂದು ಭಾವಿಸಬೇಕು. ಹಾಗಿದ್ದರೆ ಮಾತ್ರ ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಲು ಸಾಧ್ಯ ಎಂದರು.


ವಿದ್ಯಾರ್ಥಿಗಳಾದ ಕೃಷ್ಣಕಿಶೋರ, ಕಾರ್ತಿಕ್, ವರೇಣ್ಯ, ಸಮೀಕ್ಷಾ, ಮನೀಷ್, ರಾಹುಲ್, ಭರತ್, ಮಹಿಮಾ, ಸ್ಫೂರ್ತಿ, ಪ್ರಿಯಾ, ಶ್ರಾವ್ಯ, ಅಂಕಿತಾ, ಪಂಚಮಿ, ದೀಕ್ಷಾ, ಮೋಹನ್ ಆಚಾರ್ಯ ಮತ್ತು ಸಾಯಿಶ್ವೇತ ಕಾರ್ಯಕ್ರಮದಲ್ಲಿ ಚೀಟಿ ಎತ್ತಿ ತಮಗೆ ಬಂದ ವಿಷಯದ ಬಗೆಗೆ ಅಭಿನಯಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಈ ಹಿಂದಿನ ಅನುಪಮ ವೇದಿಕೆಯಲ್ಲಿ ನಡೆದ ಗಾಯನ ಕಾರ್ಯಕ್ರಮದಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಥಮ ವರ್ಷದ ವಿದ್ಯಾರ್ಥಿನಿ ಪಂಚಮಿ ಹಾಗೂ ಬಿ.ಕಾಂ ವಿದ್ಯಾರ್ಥಿನಿ ಶ್ರೀಹರ್ಷ ಅವರಿಗೆ ಬಹುಮಾನ ನೀಡಲಾಯಿತು.


ಕಾರ್ಯಕ್ರಮದಲ್ಲಿ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಅಭಿಷೇಕ್ ಎನ್, ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಅಕ್ಷಯ್ ಹೆಗಡೆ, ಇಂಗ್ಲಿಷ್ ಉಪನ್ಯಾಸಕಿ ಸಂಧ್ಯಾ ಎಂ, ಅನುಪಮ ಪ್ರತಿಭಾ ವೇದಿಕೆಯ ಕಾರ್ಯದರ್ಶಿ ವೈಷ್ಣವಿ ಜೆ ರಾವ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪತ್ರಿಕೋದ್ಯಮ ಪ್ರಥಮ ವರ್ಷದ ವಿದ್ಯಾರ್ಥಿನಿ ಪಂಚಮಿ ಸ್ವಾಗತಿಸಿದರು. ತೃತೀಯ ಪತ್ರಿಕೋದ್ಯಮದ ವಿದ್ಯಾರ್ಥಿ ಮನೀಷ್ ವಂದಿಸಿ, ದ್ವಿತೀಯ ಪತ್ರಿಕೋದ್ಯಮದ ವಿದ್ಯಾರ್ಥಿನಿ ಮೇಘಾ ಡಿ. ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post