ಪುತ್ತೂರು: ಇಲ್ಲಿನ ಪ್ರತಿಷ್ಠಿತ 75 ವರ್ಷಗಳ ಪರಂಪರೆಯ ಮುಳಿಯ ಜ್ಯುವೆಲ್ಸ್ ಉಪ್ಪಿನಂಗಡಿಯ ನೆಲ್ಯಾಡಿಯಲ್ಲಿ ತನ್ನ ಬೆಳ್ಳಿ ಆಭರಣಗಳ 'ಸಿಲ್ವರಿಯಾ' ಶೋರೂಂನ್ನ ಆರಂಭಿಸಲಿದೆ. ಆರ್ಕಿಟೆಕ್ ಹಾಗೂ ಇಂಟೀರಿಯರ್ ಡಿಸೈನರ್ ರವೀಶ್ ಅವರಿಗೆ ಮುಳಿಯ ಸಹೋದರರಾದ ಕೇಶವ ಪ್ರಸಾದ್ ಮುಳಿಯ & ಕೃಷ್ಣ ನಾರಾಯಣ ಮುಳಿಯ ನಕ್ಷೆಯನ್ನು ನೀಡುವ ಮೂಲಕ ಕೆಲಸ ಆರಂಭಿಸಲಾಯಿತು.
ಈ ಸಿಲ್ವರಿಯಾ ಫ್ರಾಂಚೈಸಿ ಶಾಪ್ನಲ್ಲಿ ಮಾಸಿಕ ಕಂತುಗಳನ್ನು ಸ್ವೀಕರಿಸಲಾಗುವುದು. ಮುಂದೆ 2-3 ತಿಂಗಳಲ್ಲಿ ಈ ಶೋರೂಂ ಅನಾವರಣಗೊಳ್ಳಲಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ದಿಗ್ದರ್ಶಕರಾದ ಸರಾಫ್ ಮುಳಿಯ ಶ್ಯಾಮ ಭಟ್, ಕಟ್ಟಡದ ಮಾಲೀಕರಾದ ಶ್ರೀ ಸತೀಶ್ ಭಟ್, ಪುತ್ತೂರು ಶಾಖಾ ಪ್ರಬಂಧಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ