ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಫೆಲೋ ಆಗಿ ಡಾ|| ಚೂಂತಾರು ಆಯ್ಕೆ

Upayuktha
0

“ವಿಜ್ಞಾನ್ ಸರ್ವತ್ರ ಪೂಜ್ಯತೇ” – ವಿಜ್ಞಾನ ಸಂವಹನ ಹಬ್ಬದ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ


ಬೆಂಗಳೂರು: ರಾಜ್ಯ ಮಟ್ಟದ ವಿಜ್ಞಾನ ಸಂವಹನ ಹಬ್ಬದ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಂಗಳವಾರ (ಫೆ.22) ಬೆಂಗಳೂರಿನ ಪ್ರೊ.ಯು.ಆರ್ ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಯಲಹಂಕ ಕ್ಷೇತ್ರದ ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ಆರ್. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ, ವಿಜ್ಞಾನ ಮತ್ತು ತಂತ್ರಜ್ಞಾನ, ವಿದ್ಯುನ್ಮಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರಾದ ಡಾ|| ಅಶ್ವಥ್ ನಾರಾಯಣ ಸಿ. ಎಸ್, ಅವರು ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಅಧ್ಯಕ್ಷರಾದ ಪ್ರೊ.ಎಸ್. ಅಯ್ಯಪ್ಪನ್,  ಇವರು ಸ್ವಾಗತ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ 2022ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ|| ಮುರಲೀ ಮೋಹನ್ ಚೂಂತಾರು ಇವರು ಫೆಲೋ ಆಗಿ ಆಯ್ಕೆಯಾದರು. ಇವರ ಸಾಹಿತ್ಯ ಕ್ಷೇತ್ರ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ, ಉನ್ನತ ಶಿಕ್ಷಣ ಸಚಿವರು ಈ ಪ್ರಶಸ್ತಿ ಪ್ರದಾನ ಮಾಡಿದರು.


ಈ ಸಂದರ್ಭದಲ್ಲಿ ವಿಶೇಷ ಅತಿಥಿಗಳಾಗಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ ಸದಾನಂದ ಗೌಡರು ಭಾಗವಹಿಸಿದ್ದರು. ಗೌರವಾನ್ವಿತ ಅತಿಥಿಗಳಾಗಿ ಪ್ರಧಾನ ಮಂತ್ರಿಗಳ ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಪ್ರೊ. ಕೆ. ವಿಜಯರಾಘವನ್ ಮತ್ತು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ/ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ|| ಇ.ವಿ. ರಮಣರೆಡ್ಡಿ, ಭಾ, ಆ.ಸೇ ಇವರುಗಳು ಆಗಮಿಸಿದ್ದರು. ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ|| ಎ.ಎಂ ರಮೇಶ್ ವಂದಿಸಿದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



free website counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top