ಕೊಂಚಾಡಿ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ದಿನಾಂಕ 04-02-2022ನೇ ಶುಕ್ರವಾರದಂದು ನಗರದ ದೇರೇಬೈಲು ಕೊಂಚಾಡಿ ಇಲ್ಲಿನ ಯುವಕ ಮಂಡಲ ಮತ್ತು ಚೂಂತಾರು ಸರೋಜಿನಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದೇರೇಬೈಲ್ ಕೊಂಚಾಡಿಯ ಯುವಕ ಮಂಡಲದ ಸಭಾಂಗಣದಲ್ಲಿ ರಾತ್ರಿ 7 ರಿಂದ 8 ರವರೆಗೆ ಬಾಯಿ ಕ್ಯಾನ್ಸರ್ ಮಾಹಿತಿ ಶಿಬಿರ ಮತ್ತು ತಿಳುವಳಿಕಾ ಶಿಬಿರ ನಡೆಯಲಿರುವುದು ಎಂದು ಚೂಂತಾರು ಸರೋಜಿನಿ ಪ್ರತಿಷ್ಠಾನ(ರಿ) ಮಂಗಳೂರು ಇದರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಭಾಗವಹಿಸಲಿದ್ದಾರೆ. ದೇರೇಬೈಲ್ ಕೊಂಚಾಡಿ ಪರಿಸರದ ಜನರು ಈ ಶಿಬಿರದ ಪ್ರಯೋಜನವನ್ನು ಪಡೆಯಲು ಕೋರಲಾಗಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ