ಉಡುಪಿ: 'ಹೊಸ ಭಾರತವಾಗಿರಿ ಮತ್ತು ಪರಿಹಾರಗಳನ್ನು ಕಂಡುಕೊಳ್ಳಿ ಮತ್ತು ಕೊಡುಗೆ ನೀಡಿ' (ಕನ್ನಡ), 'The New India and find solutions & contribute to Policy' (ಇಂಗ್ಲೀಷ್) ಮತ್ತು "नया भारत बनें और समाधान खोजें और नीति में योगदान करें" (ಹಿಂದಿ) ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯು ಫೆ. 19 ರಂದು ಮಧ್ಯಾಹ್ನ 1 ರಿಂದ 4.00 ರ ವರೆಗೆ ಮಣಿಪಾಲ ಜಿಲ್ಲಾಧಿಕಾರಿಯ ಕಛೇರಿ ಆವರಣದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಕಚೇರಿಯಲ್ಲಿ ನಡೆಯಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ dyc.udupi@gmail.com ಅಥವಾ ಜಿಲ್ಲಾ ಯುವ ಅಧಿಕಾರಿ, ನೆಹರು ಯುವ ಕೇಂದ್ರ, ರಜತಾದ್ರಿ, ಬಿ. ಬ್ಲಾಕ್, ಜಿಲ್ಲಾಧಿಕಾರಿಯ ಕಛೇರಿ ಆವರಣ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ 0820-2574992, ಮೊ.ನಂ: 9958325151, ಲೆಕ್ಕಾಧಿಕಾರಿ ಮೊ.ನಂ: 8762114883 ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ