‘ಹಳ್ಳಿಯತ್ತ ನಮ್ಮ ಚಿತ್ತ..’ ವಿವೇಕಾನಂದ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಕ್ಯಾಂಪ್‌ಗೆ ಚಾಲನೆ

Upayuktha
0

ಪುತ್ತೂರು: ಶಾರೀರಿಕ, ಬೌದ್ಧಿಕ, ವೈಚಾರಿಕ, ಮನೋರಂಜನೆಯ ಕಾರ್ಯ ಪ್ರಯೋಗ ಮಾಡಿ ಕಲಿಯುವಂತಹದ್ದು. ಅಂತಹ ಪ್ರಾಯೋಗಿಕ ಕಲಿಕೆಗೆ ಶಿಬಿರಗಳು ಅವಕಾಶ ಮಾಡಿಕೊಡುತ್ತವೆ. ಇಲ್ಲಿ ಅನುಭವವೇ ವಿಶೇಷ ಪಾಠ. ಇದರೊಂದಿಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ದೃಷ್ಟಿಕೋನವು ಕೂಡ ಬೆಳೆಯಬೇಕು ಎಂದು ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಸ್. ಕೃಷ್ಣ ಭಟ್ ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ವತಿಯಿಂದ ಕಾಲೇಜಿನ ಐಕ್ಯೂಎಸಿ ಹಾಗೂ ಅಳಿಕೆ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಅಮೃತ ಸಮುದಾಯ ಯೋಜನೆಯಡಿಯಲ್ಲಿ ‘ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ’ ಎಂಬ ಶಿರೋನಾಮೆಯಲ್ಲಿ ‘ಹಳ್ಳಿಯತ್ತ ನಮ್ಮ ಚಿತ್ತ..’ ಎಂಬ ಘೋಷಣೆಯೊಂದಿಗೆ ಅಳಿಕೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಡಿಯಾಲದಲ್ಲಿ ಆಯೋಜಿಸಲಾದ ವಾರ್ಷಿಕ ವಿಶೇಷ ಶಿಬಿರ 2021-2022 ವನ್ನು ಉದ್ಘಾಟಿಸಿ ಗುರುವಾರ ಮಾತನಾಡಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಭಟ್ ಮಾತನಾಡಿ, ಎನ್‌ಎಸ್‌ಎಸ್‌ನ ಧ್ಯೇಯವಾಕ್ಯ ಹಾಗೂ ಭಗವಾನ್ ಸತ್ಯಸಾಯಿ ಅವರ ಧ್ಯೇಯವಾಕ್ಯ ಎರಡೂ ಒಂದೇ. ಎನ್‌ಎಸ್‌ಎಸ್‌ನ ಶಿಬಿರದಲ್ಲಿ ಭಾಗವಹಿಸಿದವರು ಜೀವನದಲ್ಲಿ ಎಂದೂ ಸೋಲುವುದಿಲ್ಲ. ನನಗೆ ಸಮಾಜ ಏನು ಕೊಟ್ಟಿದೆ ಎನ್ನುವುದಕ್ಕಿಂತ, ನಾನು ಸಮಾಜಕ್ಕೆ ಏನು ಕೊಟ್ಟಿದೇನೆ ಎನ್ನುವುದು ಮುಖ್ಯ ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಮಾತನಾಡಿ, ಶಿಬಿರಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಜೊತೆಗೆ ಮೊಬೈಲ್ ಇಲ್ಲದೆ ಇರುವ ಈ ನಿಮ್ಮ  ಸಮಯ ಅತ್ಯಂತ  ಸುಂದರವಾದುದು. ಈ ಅನುಭವವನ್ನು ಕ್ಯಾಂಪ್‌ಗಳು ನೀಡುತ್ತದೆ ಎಂದು ಅಭಿಪ್ರಾಯ ಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಮಾತನಾಡಿ, ಶಿಕ್ಷಣ ಹಾಗೂ ಸೇವೆಗೆ ಹೆಸರಾದ ಸಂಸ್ಥೆಗಳು ಎಂದರೆ ಅಳಿಕೆ ಮತ್ತು ವಿವೇಕಾನಂದ ವಿದ್ಯಾಸಂಸ್ಥೆ. ಯಾವುದೇ ಫಲಾಪೇಕ್ಷೆಯಿಲ್ಲದೇ ಕೆಲಸ ಮಾಡಿದರೆ ಜನ ಗುರುತಿಸುತ್ತಾರೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಳಿಕೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಭಾಸ್ಕರ ಮಡಿಯಾಲ ಮಾತನಾಡಿ, ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಿಗೆ ಸಿಗುವ ಅವಕಾಶಗಳು ಅದ್ಭುತವಾದುದು ಎಂದು ನುಡಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುರೇಶ್ ಮಡಿಯಾಲ, ಎನ್ಎಸ್ ಎಸ್ ಶಿಬಿರಾಧಿಕಾರಿಗಳು ಹಾಗೂ ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ಸ್ವಸ್ತಿಕ್, ನಾಗೇಂದ್ರ ಶರ್ಮ, ಭಾರತಿ ಉಪಸ್ಥಿತರಿದ್ದರು.


ವಿವೇಕಾನಂದ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಶ್ರೀನಾಥ್ ಸ್ವಾಗತಿಸಿ ಪ್ರಸ್ತಾವನೆಗೈದರು. ಭವ್ಯಾ.ಪಿ.ಆರ್ ನಿಡ್ಪಳ್ಳಿ ವಂದಿಸಿ, ವಿದ್ಯಾ ಕೆ. ಎನ್ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಸಹಕರಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



free counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top