ಪಣಂಬೂರು: ದಿನಾಂಕ 17-02-2022ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಪಣಂಬೂರು ಘಟಕಕ್ಕೆ ಇನ್ಫೋಸಿಸ್ ವತಿಯಿಂದ ನೀಡಲಾದ ಕಂಪ್ಯೂಟರ್ನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿಯಾದ ಶ್ರೀ ಶಿವಪ್ಪ ನಾಯ್ಕ್ ಇವರಿಗೆ ಹಸ್ತಾಂತರಿಸಿದರು.
ಹಾಗೂ ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಘಟಕಗಳ ವಾರದ ಕವಾಯತಿನ ಹಾಜರಾತಿಗಳನ್ನು ಕಂಪ್ಯೂಟರ್ ಮೂಲಕವೇ ಕಳುಹಿಸುವಂತೆ ಸೂಚಿಸಿದರು ಮತ್ತು ಕಾಗದ ರಹಿತ ಕಛೇರಿ ಆಗಬೇಕೆಂದು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕದಳದ ಕಛೇರಿ ಅಧೀಕ್ಷಕರಾದ ಶ್ರೀ ರತ್ನಾಕರ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್, ದಲಾಯತ್ ಮೀನಾಕ್ಷಿ ಮಂಗಳೂರು ಘಟಕದ ಘಟಕಾಧಿಕಾರಿ ಶ್ರೀ ಮಾರ್ಕ್ಶೇರಾ, ಗೃಹರಕ್ಷಕರಾದ ದಿವಾಕರ್, ದುಷ್ಯಂತ್, ಶುಭ, ದೀಕ್ಷಾ, ಸುಲೋಚನ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ