ಮಂಗಳೂರು: ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ ಅವರ ಜನಪ್ರಿಯ ತುಳು ಜಾನಪದ ನಾಟಕ 'ಗೋಂದೊಳು' ಇತ್ತೀಚೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ಮಹಾನಗರಪಾಲಿಕೆ ಮತ್ತು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಆಯೋಜಿಸಿದ್ದ 'ನಮ್ಮ ಅಬ್ಬಕ್ಕ- 2022 ಅಮೃತ ಸ್ವಾತಂತ್ರ್ಯ ಸಂಭ್ರಮ' ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿತು. ವಿದ್ದು ಉಚ್ಚಿಲ್ ಅವರ ನಿರ್ದೇಶನದಲ್ಲಿ ಜರ್ನಿ ಥೇಟರ್ ಗ್ರೂಪ್ (ರಿ.) ಮಂಗಳೂರು ಈ ನಾಟಕವನ್ನು ಅಭಿನಯಿಸಿದ್ದರು.
ಈ ಸಂದರ್ಭದಲ್ಲಿ ಸ್ವತ: ಡಾ.ಅಮೃತ ಸೋಮೇಶ್ವರ ಅವರು ಗಾಲಿ ಕುರ್ಚಿಯಲ್ಲಿ ಬಂದು ಕುಟುಂಬದ ಸದಸ್ಯರೊಂದಿಗೆ ನಾಟಕವನ್ನು ವೀಕ್ಷಿಸಿದರು. ಅವರ ಧರ್ಮಪತ್ನಿ ನರ್ಮದಾ ಸೋಮೇಶ್ವರ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ಸಂಘಟನಾ ಕಾರ್ಯದರ್ಶಿ ತೋನ್ಸೆ ಪುಷ್ಕಳಕುಮಾರ್, ಜಾನಪದ ತಜ್ಞ ಕೆ.ಕೆ.ಪೇಜಾವರ, ಪ್ರತಿಷ್ಠಾನದ ಪದಾಧಿಕಾರಿಗಳು ಮತ್ತು ನಾಟಕ ಕಲಾವಿದರು ಅವರೊಂದಿಗಿದ್ದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ