ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ರಥೋತ್ಸವ ನಡೆಯಿತು.
ಉಜಿರೆ: ಶಿವರಾತ್ರಿ ಸಂದರ್ಭದಲ್ಲಿ ಬುಧವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತಾದಿಗಳು ಶ್ರದ್ಧಾ-ಭಕ್ತಿಯಿಂದ ದೇವರ ದರ್ಶನ ಪಡೆದು, ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಶಿವಪಂಚಾಕ್ಷರಿ ಪಠಣದೊಂದಿಗೆ ಭಕ್ತಾದಿಗಳು ಅಹೋರಾತ್ರಿ ಜಾಗರಣೆ ಮಾಡಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ