161 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹ: ಪ್ರಧಾನಿ ಮೋದಿಯವರಿಂದ ಶ್ರೀರಾಮ ನವಮಿಯಂದು ಲೋಕಾರ್ಪಣೆ

Upayuktha Writers
0

ಕುಣಿಗಲ್:  ಬಿದನಗೆರೆ ಬಸವೇಶ್ವರ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಶ್ವ ವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಪ್ರಧಾನಿ  ಮೋದಿ ಅವರು ವರ್ಚುವಲ್ ವಿಡಿಯೋ ಮೂಲಕ ಏ. 10 ಭಾನುವಾರ ಶ್ರೀರಾಮ ನವಮಿಯಂದು ಲೋಕಾರ್ಪಣೆ ಮಾಡಲಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶ್ರೀ ಕ್ಷೇತ್ರದ ಪೀಠಾಧಿಕಾರಿ ಡಾ.ಧನಂಜಯ ಗುರೂಜಿ ತಿಳಿಸಿದ್ದಾರೆ.



ಕಾರ್ಯಕ್ರಮಕ್ಕೆ ಬರಲು ನನಗೆ ಸಂತಸವಾಗಿದ್ದರೂ, ಕಾರ್ಯನಿಮಿತ್ತ ಬರಲು ಸಾಧ್ಯವಾಗುತ್ತಿಲ್ಲ, ವರ್ಚುವಲ್ ವಿಡಿಯೋ ಮೂಲಕ ವಿಗ್ರಹವನ್ನು ಲೋಕಾರ್ಪಣೆ ಮಾಡುತ್ತೇನೆ, ಮತ್ತೊಮ್ಮೆ ಕ್ಷೇತ್ರಕ್ಕೆ ಭೇಟಿ ನೀಡುವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಗುರೂಜಿ ತಿಳಿಸಿದರು.



hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top