ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ತಾಲೂಕು ಘಟಕ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಹಾಗೂ ಶ್ರೀ ವೇದಮಾಯು ಆಸ್ಪತ್ರೆ ಪದವು, ಮಂಗಳೂರು ಇವರ ಸಹಕಾರದೊಂದಿಗೆ, ಡಾ|| ಮಂಜುನಾಥ್ ಎಸ್.ರೇವಣಕರ್, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಆಹಾರ, ಆರೋಗ್ಯ ಮತ್ತು ಸಾಹಿತ್ಯ ವಿಚಾರಗೋಷ್ಠಿ ಕಾರ್ಯಕ್ರಮವು ದಿನಾಂಕ 21-04-2022 ನೇ ಗುರುವಾರದಂದು ಸಾಯಂಕಾಲ 6:30 ಕ್ಕೆ ಶ್ರೀ ವೇದಮಾಯು ಆಸ್ಪತ್ರೆ ಪದವು, ಮಂಗಳೂರು ಇಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಡಾ|| ಕೇಶವ ರಾಜ್ ಆಯುರ್ವೇದಿಕ್ ಪಿಸಿಷಿಯನ್, ಮಂಗಳೂರು ಇವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಸದಸ್ಯರುಗಳಿಗೆ ಮುಕ್ತ ಆಹ್ವಾನ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಹಾಗೂ ಶ್ರೀ ಗಣೇಶ್ ಪ್ರಸಾದ್ಜಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.