ಉಡುಪಿಯಲ್ಲಿ ನೂತನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ: ಏ.11ಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆ

Upayuktha
0

ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ ಬಸ್ಸು ನಿಲ್ದಾಣಕ್ಕೆ "ಡಾ. ವಿ. ಎಸ್. ಆಚಾರ್ಯ ಬಸ್ಸು ನಿಲ್ದಾಣ" ಎಂದು ನಾಮಕರಣ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಈ ನೂತನ ಬಸ್ ನಿಲ್ದಾಣವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಏ.11ರಂದು ಉದ್ಘಾಟಿಸಲಿದ್ದಾರೆ.


ಡಾ. ವಿ. ಎಸ್. ಆಚಾರ್ಯ ಬಸ್ಸು ನಿಲ್ದಾಣ ಎಂದು ನಾಮಕರಣ ಮಾಡಿರುವುದಕ್ಕಾಗಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ಅವರಿಗೆ ಉಡುಪಿ ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


ಉಪಯುಕ್ತ ನ್ಯೂಸ್ ಫೇಸ್‌ಬುಕ್ ಪುಟ ಲೈಕ್ ಮಾಡಿ:

Post Views: hit counter

Post a Comment

0 Comments
Post a Comment (0)
To Top