ಜೂ.26: ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಮಂಗಳೂರು ವತಿಯಿಂದ “ಗುರುನಮನ”

Upayuktha
0

ಮಂಗಳೂರು: ಶತಮಾನ ಪರಂಪರೆಯ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ 'ಗುರುನಮನ' ಕಾರ್ಯಕ್ರಮವನ್ನು ಜೂ.26ರಂದು ಭಾನುವಾರ ಕೊಡಿಯಾಲಬೈಲ್‌ನ ಟಿ.ವಿ. ರಮಣ ಪೈ ಸಭಾಭವನದಲ್ಲಿ ಏರ್ಪಡಿಸಲಾಗುತ್ತಿದೆ.


ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶಿಕ್ಷಕೇತರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕೆನರಾ ಶಿಕ್ಷಣ ಸಂಸ್ಥೆಗಳ ವಿವಿಧ ಸಂಘಗಳ ಸಹಯೋಗದಿಂದ ನಡೆಯುವ ಈ ಗುರುನಮನ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ.


ಪೂರ್ವಾಹ್ನ 9.30ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.


ಸಂಸ್ಥೆಗಳಲ್ಲಿ ಈಗ ಲಭ್ಯವಿರುವ ದಾಖಲೆ ಪತ್ರಗಳನ್ನು ಆಧರಿಸಿ ಅವರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಅವರಲ್ಲಿ ಅತ್ಯಂತ ಹಿರಿಯರಾಗಿರುವವರು 84ರ ಹರೆಯದ ನಿವೃತ್ತ ಶಿಕ್ಷಕಿ ಮಾಲತಿಯವರು. ಈ ಎಲ್ಲಾ ನಿವೃತ್ತ ಶಿಕ್ಷಕರು -ಶಿಕ್ಷಕೇತರರು ತಮ್ಮ ಸೇವಾ ಬದ್ಧತೆಯಿ೦ದ ಕೆನರಾ ಶಿಕ್ಷಣ ಸಂಸ್ಥೆಗಳ ಉನ್ನತಿಗೆ ಕಾರಣರಾಗಿದ್ದಾರೆ.


ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಈಗ ಕೆ.ಜಿ.ಯಿಂದ ಎಂಜಿನಿಯರಿಂಗ್ ವರೆಗೆ 11 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ. 8592 ಮಂದಿ ವಿದ್ಯಾರ್ಥಿಗಳಿದ್ದಾರೆ. ಗುರುನಮನ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆಗಳನ್ನು ಸ್ವಯಂ ಸೇವಕರು ನಡೆಸಿದ್ದಾರೆ. ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಮುನ್ನುಡಿಯಾಗುವುದು ಎಂಬ ನಿರೀಕ್ಷೆ ಇದೆ. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.


ಈ ಕುರಿತು ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀ ರಂಗನಾಥ ಭಟ್, ಹಿರಿಯ ಪತ್ರಕರ್ತರು ಮತ್ತು ಕೆನರಾ ಹಳೆ ವಿದ್ಯಾರ್ಥಿ ಶ್ರೀ ಮನೋಹರ ಪ್ರಸಾದ್, ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ಉಜ್ವಲ್ ಕೆನರಾ ಹಳೆ ವಿದ್ಯಾರ್ಥಿಗಳಾಗಿರುವ ಸುಧೀರ ಭಕ್ತ ಮತ್ತು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top