ಬೆಂಗಳೂರು: ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಮಂತ್ರಾಲಯ ಶ್ರೀಗಳಿಗೆ ಅಭಿವಂದನೆ

Upayuktha
0

ಬೆಂಗಳೂರು: ಶ್ರೀ ಮಂತ್ರಾಲಯ ಗುರುರಾಘವೇಂದ್ರ ಮಠದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರ 50 ನೇ ಜನ್ಮವರ್ಧಂತಿ ವರ್ಷದ ಅಂಗವಾಗಿ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಪೇಜಾವರ ಮಠದ ವತಿಯಿಂದ ಅಭಿವಂದನ ಸಮಾರಂಭ ಸೋಮವಾರ ಸಂಜೆ ನಡೆಯಿತು.


ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಶ್ರೀ ಸುಬುಧೇಂದ್ರತೀರ್ಥರು ಮಂತ್ರಾಲಯ ಕ್ಷೇತ್ರವನ್ನು ಅತ್ಯಂತ ಭಕ್ತ ಸ್ನೇಹಿಯನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಸಾಕಾರಗೊಳಿಸುತ್ತಿರುವುದನ್ನು ಶ್ಲಾಘಿಸಿದರು.


ವಿದ್ವಾನ್ ರಾಮವಿಠಲಾಚಾರ್ಯರು ಅಭಿವಂದನ ಭಾಷಷಣಗೈದರು. ವಿದ್ಯಾಪೀಠದ ವಿದ್ವಾಂಸರು ಪ್ರಾಧ್ಯಾಪಕ ವೃಂದ, ವಿದ್ಯಾರ್ಥಿಗಳು ನೂರಾರು ಭಕ್ತರು ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top