ಉಡುಪಿ: ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಉದಯವಾಣಿ ಮಣಿಪಾಲ ಆವೃತ್ತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ ಗೊಂಡಿದೆ.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಿರ್ಮಿಸಲಾದ ಈ ಚಿತ್ರ ಕೃತಿ ಕಲಾಚಿತ್ರ ವಿಭಾಗದಲ್ಲಿ ಆಯ್ಕೆಗೊಂಡಿರುವುದು ಬಹು ಪ್ರಶಂಸೆಗೆ ಪಾತ್ರವಾಗಿದೆ. ದೇಶದ 2351 ಕಲಾವಿದರಿಂದ 5450 ಕಲಾಕೃತಿಗಳು ಆಯ್ಕೆಗೆ ಆಗಮಿಸಿದ್ದವು. ಅದರಲ್ಲಿ ಕೇವಲ 300 ಕಲಾಕೃತಿಯನ್ನು ಮಾತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ