ಶೇಷಾದ್ರಿಪುರಂ: ಉಚಿತ ಕಣ್ಣಿನ ತಪಾಸಣೆ ಮತ್ತು ನೇತ್ರದಾನ ಶಿಬಿರ

Upayuktha
0


ಶೇಷಾದ್ರಿಪುರಂ:
 ಶಿಕ್ಷಣದತ್ತಿ ಆವರಣ ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಯೂತ್‌ ರೆಡ್‌ ಕ್ರಾಸ್ ಮತ್ತು ಎನ್.ಎಸ್.ಎಸ್‌ ಘಟಕದ ವತಿಯಿಂದ ಲಯನ್ಸ್ ಕ್ಲಬ್ ಬೆಂಗಳೂರು ಸೆಂಟೇನಿಯಲ್ ಸರ್ವೀಸಸ್ ಮತ್ತು ನಾರಾಯಣ ನೇತ್ರಾಲಯ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ಇಂದು (ಜು. 29) ಉಚಿತ ಕಣ್ಣಿನ ತಪಾಸಣೆ ಮತ್ತು ನೇತ್ರದಾನ ಶಿಬಿರವನ್ನು ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಮತ್ತು ಬೋತಕೇತರ ವರ್ಗದವರಿಗೆ ಹಾಗೂ ಪೋಷಕರಿಗಾಗಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ದಕ್ಷಿಣ ಭಾರತ ಈ.ಬಿ.ಎ.ಎಲ್‌ ಇದರ ಅಧ್ಯಕ್ಷ ಡಾ. ಎಂ.ಕೆ. ಕೃಷ್ಣ ಇವರು ಉದ್ಘಾಟಿಸಿ ನೇತ್ರದಾನ ಮಾಡುವುದು ಜಗತ್ತಿನಲ್ಲಿ ಅತ್ಯುತ್ತಮವಾದ ಸೇವಾ ಕಾರ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ.ವೂಡೇ ಪಿ. ಕೃಷ್ಣ ಮಾತನಾಡಿ, ನೇತ್ರದಾನ ಮಾಡುವ ಸೇವಾ ಮನೋಭಾವವು ಯುವಕರಲ್ಲಿ ಹೆಚ್ಚಾಗಬೇಕು ಮತ್ತು ಕಣಿನ ಆರೋಗ್ಯದ ಕಡೆ ಹೆಚ್ಚು ಗಮನ ವಹಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಎಲ್.ಸಿ.ಬಿ.ಸಿ.ಎಸ್ ಅಧ್ಯಕ್ಷ ಲಯನ್ ಮಣಿ. ವಿ, ವೀರೇಶ್, ಡಾ. ರಾಜ್‌ಕುಮಾರ್ ನೇತ್ರ ಬ್ಯಾಂಕ್, ಡಾ.ಕೃತಿಕ, ನೇತ್ರ ತಜ್ಞರು, ನಾರಾಯಣ ನೇತ್ರಾಲಯ ಹಾಗೂ ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ಎಸ್. ಸತೀಶ್, ಆಂತರಿಕ ಗುಣಮಟ್ಟ ಹಾಗೂ ಭರವಸಾ ಸಮಿತಿಯ ಸಂಚಾಲಕರಾದ ನಾಗಸುಧಾ ಆರ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ವಿನಯ್ ಸಾಗರ್‌ ಎಲ್.ಎಸ್. ಯೂತ್‌ ರೆಡ್‌ ಕ್ರಾಸ್ ಸಂಚಾಲಕರಾದ ಮೋಹನ್.ಟಿ ಇವರುಗಳು ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top