ಮಂಗಳೂರು: ಉನ್ನತ ಭಾರತ್ ಅಭಿಯಾನ ಮತ್ತು ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ರೂರಲ್ ರೀಕನ್ಸ್ಟ್ರಕ್ಷನ್ ಏಜೆನ್ಸಿ (ಸಿರ್ರಾ) ವತಿಯಿಂದ ಜುಲೈ 20 ರಂದು ದತ್ತು ಗ್ರಾಮ ಪಾವೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಮಾಜ ವಿಜ್ಞಾನ ಮತ್ತು ಮಾನವಿಕ ಸಂಸ್ಥೆಯ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳು ಶ್ರಮದಾನ ಕಾರ್ಯಕ್ರಮದಲ್ಲಿ ಹಳೆಯ ಕಟ್ಟಡವನ್ನು ಕೆಡವಿದರು. ಸಿರ್ರಾ ಕೋ-ಆರ್ಡಿನೇಟರ್, ಅಸೋಸಿಯೇಟ್ ಪ್ರೊಫೆಸರ್ ಡಾ.ವಿದ್ಯಾ ಮತ್ತು ಅಧ್ಯಾಪಕ ಸಂಯೋಜಕ ಪ್ರೊ. ಜಾಯ್ಸನ್ ಪ್ರೇಂಕಿ ಕಾರ್ಡೋಜ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪಾವೂರು ಶಿಕ್ಷಕರಾದ ಮೊಹಮ್ಮದ್ ಮಜೀದ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ