ಪುತ್ತೂರು: ನಾವು ಮಾಡುವ ಯಾವುದೇ ಕೆಲಸವೂ ಪರರಿಗೆ ಇಷ್ಟವಾಗಿ ಅವರಿಗೆ ಖುಷಿಯನ್ನು ತಂದುಕೊಟ್ಟರೆ ಅದುವೇ ನಮ್ಮ ಜೀವನದ ನಿಜವಾದ ಸಾರ್ಥಕ್ಯ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣವೆಂಬುವುದು ಬಹುಮುಖ್ಯ ಘಟ್ಟ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣವನ್ನು ಕಡ್ಡಾಯವಾಗಿ ಪಡೆಯಲೇಬೇಕು. ಅಂತೆಯೇ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತುಳು ಸಿನಿಮಾ ನಿರ್ಮಾಪಕ ಹಾಗೂ ನಟ ವಿನೀತ್ ಕುಮಾರ್ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ತಾರಂಗನ್-2022 ಅಂತರ್ ತರಗತಿ ಫೆಸ್ಟ್ ನಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
ತುಳು ನಾಡಿನ ಚಿತ್ರರಂಗದಲ್ಲಿ ನಾಯಕ ನಟನಾಗಿ ವಿನೀತ್ ಕುಮಾರ್ ಗುರುತಿದಿಕೊಳ್ಳುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಇತ್ತೀಚೆಗಷ್ಟೇ ಮೂಡಿಬಂದ ಇವರ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ಒಂದು ಕುಟುಂಬ ಆಧಾರಿತ ಸಿನಿಮಾವಾಗಿದ್ದು ಸಾಮಾಜಿಕವಾಗಿ ಹಲವಾರು ಒಳ್ಳೆಯ ಸಂದೇಶವನ್ನು ನೀಡಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ.ಎನ್ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರೆ ಮುಂದಿನ ಜೀವನ ಸುಲಭ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಅಶ್ವಿನಿ ಹಾಗೂ ಸಾಕ್ಷಿ ಕಾರ್ಯಕ್ರಮದ ಕುರಿತು ಅಭಿಪ್ರಾಯವನ್ನು ಹಂಚಿಕೊಂಡರು. ನಂತರ ಅಂತರ್ ತರಗತಿ ಸ್ಫರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಬಿಕಾಂ ತಂಡ ಪ್ರಥಮ ಬಹುಮಾನವನ್ನು ಪಡೆಯಿತು.
ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ, ವಿದ್ಯಾರ್ಥಿ ಸಂಯೋಜಕ ಪುಶನ್ ಪ್ರಸಾದ್ ಹಾಗೂ ಆಕಾಂಕ್ಷ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆಕಾಂಕ್ಷ ಸ್ವಾಗತಿಸಿ ಪುಶನ್ ಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ವಿಭಾಗದ ಉಪನ್ಯಾಸಕ ಪುನೀತ್ ಕುಮಾರ್ ಹಾಗೂ ಉಪನ್ಯಾಸಕಿ ಜ್ಯೋತಿ ಎಂ.ಎಂ ಸಹಕರಿಸಿದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ