ಮಂಗಳೂರು: ಆ. 26ರಂದು ಹೃದಯ ಸ್ತಂಭನ ಮರುಪೂರಣ ಕೌಶಲ್ಯ ತರಬೇತಿ ಶಿಬಿರ

Upayuktha
0

ಮಂಗಳೂರು: ರಾಜೀವ ಗಾಂಧಿ ವಿಶ್ವ ವಿದ್ಯಾಲಯದ ಅಡಿಯಲ್ಲಿ ಕರ‍್ಯ ನಿರ್ವಹಿಸುವ ಜೀವರಕ್ಷಾ ಟ್ರಸ್ಟ್ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ ಇದರ ಸಹಯೋಗದೊಂದಿಗೆ, ರೋಟರಿ ಕ್ಲಬ್ ಹಿಲ್‌ಸೈಡ್ ಮಂಗಳೂರು ಇವರ ಪ್ರಾಯೋಜಕತ್ವದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಮತ್ತು ಪೌರರಕ್ಷಣಾ ಕಾರ್ಯಕರ್ತರಿಗೆ ಹೃದಯ ಸ್ತಂಭನ ಮರುಪೂರಣ ಪ್ರಾಯೋಗಿಕ ಕೌಶಲ್ಯ ತರಬೇತಿ ಶಿಬಿರ ನಡೆಯಲಿದೆ.


ದಿನಾಂಕ 26 - 08 - 2022ನೇ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ ಜೀವರಕ್ಷಾ ಟ್ರಸ್ಟ್ ಇದರ ಮಂಗಳೂರು ವಲಯದ ಉಸ್ತುವಾರಿ ಶ್ರೀ ಡಾ|| ಕಿಶನ್ ರಾವ್ ಬಾಳಿಲ ಅವರ ನೇತೃತ್ವದಲ್ಲಿ ತರಬೇತಿ ಶಿಬಿರ ಜರುಗಲಿದೆ.


ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್, ಹಿಲ್‌ಸೈಡ್, ಮಂಗಳೂರು ಇದರ ಅಧ್ಯಕ್ಷರಾದ Rtn. PHF ಶಾಮ್‌ಲಾಲ್, ರೋಟರಿ ಕ್ಲಬ್, ಹಿಲ್‌ಸೈಡ್ ಮಂಗಳೂರು ಇದರ ಕಾರ್ಯದರ್ಶಿಗಳಾದ ಖಣಟಿ. ಡಾ|| ರಾಹುಲ್ ಟಿ.ಜಿ ಇವರು ಆಗಮಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಈಗಾಗಲೇ ಮೊದಲನೇ ಹಂತದ ತರಬೇತಿ ನಡೆದಿದ್ದು 15 ಗೃಹರಕ್ಷಕರು ಈ ತರಬೇತಿ ಪಡೆದಿರುತ್ತಾರೆ ಮತ್ತು ಈಗ ಎರಡನೇ ತಂಡದ 20 ಗೃಹರಕ್ಷಕರಿಗೆ ಹಾಗೂ ಪೌರರಕ್ಷಣಾ ತಂಡದ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪ್ರಕಟಣೆ ತಿಳಿಸಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಡಾ|| ನಿಶಾಂತ್ ಕೃಷ್ಣ ಕೆ, ಸಹಾಯಕ ಪ್ರಾಧ್ಯಾಪಕ, ಸಮುದಾಯ ವೈದ್ಯಕೀಯ ವಿಭಾಗ ಎಫ್.ಎಂ.ಎಂ.ಸಿ ಮತ್ತು ಡಾ|| ನಮ್ರತಾ ಶೆಟ್ಟಿ, ಸಹಾಯಕ ಪ್ರಾಧ್ಯಾಪಕಿ, ಶರೀರಶಾಸ್ತ್ರ ವಿಭಾಗ ಎಫ್.ಎಂ.ಎಂ.ಸಿ ಇವರು ಭಾಗವಹಿಸಲಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top