|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ: ಡಾ|| ಚೂಂತಾರು

ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ: ಡಾ|| ಚೂಂತಾರು

ಗೃಹರಕ್ಷಕ ದಳದಿಂದ ಮನೆಮನೆಗಳಲ್ಲಿ ರಾಷ್ಟ್ರ ಧ್ವಜ ಅಭಿಯಾನ


ಮಂಗಳೂರು: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ‘ಆಜಾದೀ ಕಾ ಅಮೃತ ಮಹೋತ್ಸವ’ ಅಭಿಯಾನದ ಅಂಗವಾಗಿ ದಿನಾಂಕ 04 - 08 - 2022ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಗೃಹರಕ್ಷಕರಿಗೆ ರಾಷ್ಟ್ರಧ್ವಜವನ್ನು ಹಂಚುವುದರ ಮೂಲಕ ಸಾಂಕೇತಿಕವಾಗಿ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಮ್ಮ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಆದ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರದ ಆದೇಶದಂತೆ ‘ಆಜಾದೀ ಕಾ ಅಮೃತ ಮಹೋತ್ಸವ’ ದ ಅಂಗವಾಗಿ ಗೃಹರಕ್ಷಕದಳದ ಕಛೇರಿಯಲ್ಲಿ ‘ಹರ್ ಘರ್ ತಿರಂಗ’ (ಮನೆ ಮನೆಗಳಲ್ಲಿ ರಾಷ್ಟ್ರ ಧ್ವಜ) ಎಂಬ ಅಭಿಯಾನವನ್ನು ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಚಾಲನೆ ನೀಡಲಾಯಿತು.


ರಾಷ್ಟ್ರ ಧ್ವಜವನ್ನು ಮನೆ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರಂದು ಹಾರಿಸಬೇಕು, ಅರಳಿಸಬೇಕು, ಗೌರವಿಸಬೇಕು, ರಾಷ್ಟ್ರ ಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿರುತ್ತದೆ, ಜನರಲ್ಲಿ ರಾಷ್ಟ್ರಧ್ವಜದ ಬಗ್ಗೆ ಅರಿವು, ಜಾಗೃತಿ ಮೂಡಿಸಿ ರಾಷ್ಟ್ರದ ಬಗ್ಗೆ ಅಭಿಮಾನ ಮತ್ತು ಗೌರವ ಮೂಡಿಸಬೇಕು ಎಂದು ನುಡಿದರು. ರಾಷ್ಟ್ರ ಧ್ವಜಕ್ಕೆ ಎಲ್ಲಾ ರೀತಿಯ ಗೌರವ ನೀಡಿ ಧ್ವಜ ಸಂಹಿತೆಯ ಮಾರ್ಗದರ್ಶನದಂತೆ ನಡೆಯತಕ್ಕದ್ದು. ಪ್ರತಿ ಗೃಹರಕ್ಷಕರು ತಮ್ಮ ಮನೆಗಳಲ್ಲಿ ಮೂರು ದಿನ ರಾಷ್ಟ್ರ ಧ್ವಜ ಅರಳಿಸಿ, ದೇಶ ಪ್ರೇಮ ಮೆರೆಯಬೇಕು ಎಂದು ಗೃಹರಕ್ಷಕರಿಗೆ ಆದೇಶ ನೀಡಿದರು. ಮಂಗಳೂರು ಘಟಕದ ಗೃಹರಕ್ಷಕರಿಗೆ ರಾಷ್ಟ್ರ ಧ್ವಜ ವಿತರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಕಛೇರಿಯ ಅಧೀಕ್ಷಕರಾದ ಶ್ರೀ ರತ್ನಾಕರ ಎಂ, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್, ದಲಾಯತ್ ಮೀನಾಕ್ಷೀ, ಮಂಗಳೂರು ಘಟಕದ ಘಟಕಾಧಿಕಾರಿ ಶ್ರೀ ಮಾರ್ಕ್ಶೇರಾ ಹಾಗೂ ಗೃಹರಕ್ಷಕರಾದ ಸುನೀಲ್, ಕೇಶವ ಶೆಟ್ಟಿಗಾರ್, ದಿಲೀಪ್, ದಿವಾಕರ್, ಕನಕಪ್ಪ, ವಿನಯ್, ಮಹೇಶ್ ಪ್ರಸಾದ್, ಸಂತೋಷ್, ಸುಲೋಚನ ಮುಂತಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post