ಡಿ. ವೀರೇಂದ್ರ ಹೆಗ್ಗಡೆಯವರು ಪದಕ ವಿಜೇತ ಗುರುರಾಜ್ ಅವರನ್ನು ಅಭಿನಂದಿಸಿದರು.
ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಅಧ್ಯಯನ ಮಾಡಿದ ಖ್ಯಾತ ಕ್ರೀಡಾಪಟು ಹಾಗೂ ಕಾಮನ್ವೆಲ್ತ್ ಗೇಮ್ಸ್ 61 ಕೆ.ಜಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಗುರುರಾಜ್ ಅವರನ್ನು ಭಾನುವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿ, ಸನ್ಮಾನಿಸಿದರು. ಆತನಿಗೆ ಉಜ್ವಲ ಭವಿಷ್ಯವನ್ನು ಹಾರೈಸಿ ಆಶೀರ್ವದಿಸಿದರು. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ