ಪುತ್ತೂರು: ಕಮರ್ಷಿಯಲ್ ಆರ್ಟಿಸ್ಟ್ ಎಸೋಸಿಯೇಶನ್ (ರಿ) ಪುತ್ತೂರು, ಇದರ ಆಶ್ರಯದಲ್ಲಿ ಆ.20ರಂದು ಜರುಗಿದ ಪುತ್ತೂರು ತಾಲ್ಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣಕುಂಚ ಕಲರವ 2022 ರಲ್ಲಿ ಸುಬೋಧ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಆಯಿಷತ್ ಮಶ್ ಮೂಮ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಅವಳಿಗೆ ಶಾಲೆಯ ಚಿತ್ರಕಲಾ ಶಿಕ್ಷಕಿ ಶ್ರೀಮತಿ ಶಾರದಾ ಅವರು ತರಬೇತಿ ನೀಡಿರುತ್ತಾರೆ.
ವಿದ್ಯಾರ್ಥಿನಿಗೆ ಹಾಗೂ ತರಬೇತಿ ನೀಡಿದ ಶಿಕ್ಷಕಿಗೆ, ಆಡಳಿತ ಮಂಡಳಿ, ಶಿಕ್ಷಕವೃಂದ ಶಿಕ್ಷಕೇತರ ಸಿಬ್ಬಂದಿ ವರ್ಗ, ರಕ್ಷಕ ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದೆ.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ