ಉಜಿರೆ: ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Upayuktha
0


ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಸದ್ಭಾವನಾ ದಿನದ ಮಹತ್ವದ ಬಗ್ಗೆ ತಿಳಿಸಿ ಎನ್.ಎಸ್. ಎಸ್ ಸ್ವಯಂ ಸೇವಕರಿಗೆ ಸದ್ಭಾವನಾ ಪ್ರತಿಜ್ಞೆಯನ್ನು ಮಾಡಿಸಿದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಉಪಸ್ಥಿತರಿದ್ದರು. ನಾಯಕರಾದ ವಂಶಿ ಈಶ್ವರ ಭಟ್ ಹಾಗೂ ವರ್ಧಿನೀ, ಉಪನಾಯಕರಾದ ಜಯಂತ್ ಹಾಗೂ ಪ್ರಣಮ್ಯಾ ಜೈನ್ ಮತ್ತು ಇತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top